ದೊಡ್ಡಬಳ್ಳಾಪುರ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಸಾಶನ ಫಲಾನುಭವಿ ಮುತ್ತಮ್ಮ ರವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆಯನ್ನು ನಿರ್ಮಾಣ ಮಾಡಿದ್ದು, ಗೌರವಾನ್ವಿತ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಆನಂದ ಸುವರ್ಣ ರವರು ವಾತ್ಸಲ್ಯ ಮನೆಯನ್ನು ಫಲಾನುಭವಿ ಮುತ್ತಮ್ಮ ರವರಿಗೆ ಹತ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಫಲಾನುಭವಿ ಮುತ್ತಮ್ಮ ಮಾತನಾಡಿ ವಾತ್ಸಲ್ಯ ಯೋಜನೆಯಿಂದ ತುಂಬಾ ಸಹಾಯವಾಗಿದೆ ಈ ಯೋಜನೆ ಅಡಿಯಲ್ಲಿ ಮನೆ ನಿರ್ಮಿಸಿ ನನಗೆ ವಾಸ ಮಾಡಲು ಅನುವು ಮಾಡಿಕೊಟ್ಟ ಸಮಸ್ತ ವಾತ್ಸಲ್ಯ ತಂಡಕ್ಕೆ ಸಹಕರಿಸಿದ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೆನೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಜಿಲ್ಲೆಯ ನಿರ್ದೇಶಕರಾದಂತಹ ಶ್ರೀ ಉಮರಬ್ಬ, ಶುದ್ಧ ಗಂಗಾ ನಿರ್ದೇಶಕರಾದ ಶಿವಾನಂದ್ ಆಚಾರ್ಯ, ಬೆಂಗಳೂರು ಪ್ರಾದೇಶಿಕ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ಶೆಟ್ಟಿ, ಸಮುದಾಯ ಅಭಿವೃದ್ಧಿ ಯೋಜನಾಧಿಕಾರಿಗಳಾದ ಪುಷ್ಪರಾಜ್, ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹನುಮಯ್ಯ (ಅಪ್ಪಿ )ತಾಲ್ಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಸುಧಾ ಭಾಸ್ಕರ್ ನಾಯಕ್, ಕೆರೆ ಇಂಜಿನಿಯರ್ ಅರುಣ್, ಜ್ಞಾನವಿಕಾಸ ಸಮನ್ವಯಾಧಿಕಾರಿ ವೈಷ್ಣವಿ ನಾಗರಾಜ್ ಪಂಚಾಯತ್ ಅಧ್ಯಕ್ಷರು ಹಾಗೂ ಒಕ್ಕೂಟದ ಅಧ್ಯಕ್ಷರು, ವಲಯದ ಮೇಲ್ವಿಚಾರಕರಾದ ಸಂತೋಷ್, ಸೇವಾಪ್ರತಿನಿಧಿ ರೂಪ & ರಾಧಾ, ಸ್ವ ಸಹಾಯ, ಪ್ರಗತಿ ಬಂಧು ಸಂಘದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

