
ಬೆಂಗಳೂರು : ಇಂದು ಆಯೋಜಿಸಿದ್ದ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ರವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಬಿ ವೈ ವಿಜಯೇಂದ್ರ ಸ್ವೀಕರಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರಯಡಿಯೂರಪ್ಪ ವರಿಷ್ಠರ ನಿರೀಕ್ಷೆ, ಕಾರ್ಯಕರ್ತರ ಅಪೇಕ್ಷೆ ಗುರಿ ತಲುಪುವ ನಿಟ್ಟಿನಲ್ಲಿವಹಿಸಿರುವುದು ಅಧಿಕಾರವಲ್ಲ ಹೊಣೆಗಾರಿಕೆ’ ಎಂದರಿತು ಕಾರ್ಯಕರ್ತನಾಗಿ ಹೆಜ್ಜೆ ಇಡಲಿದ್ದೇನೆ, ಪಕ್ಷ ಸದೃಢಗೊಳಿಸಲು ಪಕ್ಷದ ಪ್ರತಿಯೊಬ್ಬ ಪ್ರಮುಖರೂ ನನ್ನೊಂದಿಗೆ ಹೆಗಲು ಕೊಡಲು ಮುಂದಾಗಿರುವುದು ನನ್ನಲ್ಲಿ ಅಮಿತೋತ್ಸಾಹ ತುಂಬಿದೆ.
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ದಾ ಗೃಹಸಚಿವರಾದ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಎಲ್ಲಾ ಹಿರಿಯರೆಲ್ಲರ ಆಶೀರ್ವಾದ, ಮಾರ್ಗದರ್ಶನ,ಸಹಕಾರದೊಂದಿಗೆ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ನವ ಚೈತನ್ಯ ತುಂಬಿ 2024ರ ಲೋಕಸಭಾ ಚುನಾವಣೆಯಲ್ಲಿ 2019 ರ ಚುನಾವಣೆಯ ಫಲಿತಾಂಶ ಮತ್ತೆ ಮರುಕಳಿಸಿ ಮಗದೊಮ್ಮೆ ಮೋದಿಜೀ ಪ್ರಧಾನಿಯಾಗಿ ಭಾರತ ಪ್ರಜ್ವಲಿಸಲು ‘ಕರುನಾಡ ಜಯದ ಕಿರೀಟ’ ಸಮರ್ಪಿಸಬೇಕೆಂದು ಛಲ ಹೊತ್ತ ಕಾರ್ಯಕರ್ತರ ಪಡೆಯೊಂದಿಗೆ ಸಂಕಲ್ಪ ತೊಟ್ಟಿದ್ದೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.