
ಬೆಂಗಳೂರು: ಕನಾ೯ಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಕನಾ೯ಟಕ ಸಕಾ೯ರ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಸನ್ಮಾನ್ಯ ಶ್ರೀ ಎ.ನಾರಾಯಣಸ್ವಾಮಿರವರಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆ ಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ಪ್ರಚಾರ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ರಾಜ್ಯಾಧ್ಯಕ್ಷರಾದ ಮುನಿಕೃಷ್ಣಪ್ಪ ( ಪಾಲ್) ರವರು ನೂತನ ಅಧ್ಯಕ್ಷರನ್ನು ಭೇಟಿಮಾಡಿ ಹಲವು ವಿಷಯಗಳನ್ನು ಕುರಿತು ಸಂವಾದ ನಡೆಸಿದರು .ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ವತಿಯಿಂದ ನೂತನ ಅಧ್ಯಕ್ಷರನ್ನು ಸನ್ಮಾನಿಸಲಾಯಿತು
ಈ ಕುರಿತು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮುನಿಕೃಷ್ಣಪ್ಪ ಪಾಲ್ ಮಾತನಾಡಿ ಉತ್ತಮ ನಿಷ್ಠಾವಂತರಾದ ಎ.ನಾರಾಯಣಸ್ವಾಮಿ ರವರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತೋಷದ ವಿಷಯ ಅವರ ಪ್ರಾಮಾಣಿಕ ಸೇವೆ ಸದಾ ಸಮಾಜಕ್ಕೆ ಮಾದರಿ ಅವರ ಮಾರ್ಗದರ್ಶನದಲ್ಲಿ ನಮ್ಮ ಪ್ರಚಾರ ಸಂಸ್ಥೆಯು ಸಾಗುವುದು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಪ್ರಚಾರ ಸಂಸ್ಥೆಯ ರಾಜ್ಯ ಕಾರ್ಯಾಧ್ಯಕ್ಷರು ,ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವಿ.ನರಸಿಂಹಮೂತಿ೯ . ರಾಜ್ಯ ಘಟಕದ ಮಹಿಳಾ ಅಧ್ಯಕ್ಷೆ.ಎಂ.ರತ್ನ ಕೆ.ಬೈಲರಾಜು ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಶ್ರೀನಿವಾಸ್ ..ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ//. ರಾಜಗೋಪಾಲ್.ಹೆಚ್.ಯುವ ಸಮಿತಿ ಸದಸ್ಯರು ರುದ್ರೇಶ್ ಉಪಸ್ಥಿತರಿದ್ದರು