
“21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆ ನೆಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ.
ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿ ಪತ್ರರವಾನೆ ಮಾಡಲಾಗಿದೆ.
ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರವಿದೆ. ಆದ್ದರಿಂದ “21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು ” ಎಂಬ ವಿಷಯವನ್ನು ಪ್ರತಿ ಶಾಲೆ (6ನೇ ತರಗತಿ ನಂತರ ) ಪ್ರತಿ ಕಾಲೇಜಿನ ಪ್ರತಿ ವಿದ್ಯಾರ್ಥಿಗಳಿಗೆ ( ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಯಾರಿ ನೆಡೆಸುತ್ತಿರುವ ಮಕ್ಕಳನ್ನು ಹೊರತು ಪಡಿಸಿ ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಗಾಂಧೀಜಿಯವರನ್ನು ಅರಿತುಕೊಳ್ಳಲು ಅವಕಾಶ ಒದಗಿಸಿದಂತಾಗುತ್ತದೆ. ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೆ ಸೂಕ್ತ ಬಹುಮಾನ ನೀಡುವುದು, ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಲು ಕ್ರಮವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾದ ಮಧು ಬಂಗಾರಪ್ಪ ರವರಿಗೆ ಮನವಿ ಮಾಡಿ ಆದೇಶ ಹೊರಡಿಸಲಾಗಿದೆ.