ಸಿ ಆರ್ ಪಿ ಎಫ್ ಪೆರೇಡ್ ಗ್ರೌಂಡ್ ನಲ್ಲಿ 5ನೇ ವರ್ಷದ ಸ್ಮರಣಾಂಜಲಿ ಕಾರ್ಯಕ್ರಮ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿ

ಕೇಂದ್ರೀಯ ಅರಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2019ನೇ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿ ಆರ್ ಪಿ ಎಫ್ ನ ವೀರ ಯೋಧರ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ ಹುತಾತ್ಮ ಯೋಧರಿಗೂ 5ನೇ ವಾರ್ಷಿಕ ಸ್ಮರಣಾಂಜಲಿ ಕಾರ್ಯಕ್ರಮವನ್ನು ಗ್ರೂಪ್ ಸೆಂಟರ್, ಸಿ ಆರ್ ಪಿ ಎಫ್ ಕ್ಯಾಂಪಸ್ ದೊಡ್ಡಬಳ್ಳಾಪುರ ರಸ್ತೆ ,ಯಲಹಂಕ ಬೆಂಗಳೂರು ಇಲ್ಲಿ ದಿನಾಂಕ 14 2 2024ರಂದು ಆಯೋಜನೆ ಮಾಡಲಾಗಿದ್ದು.

 

ಪುಲ್ವಾಮಾ ದಾಳಿಯಲ್ಲಿ ದೇಶಕ್ಕಾಗಿ ಮಡಿದ ಯೋಧರ ಸವಿನೆನಪಿನಲ್ಲಿ ಮಾಜಿ ಅರೇಸೇನಾಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಸಮಾವೇಶ ಆಯೋಜನೆ ಮಾಡಿದ್ದು ಸದರಿ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ,ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೇರಿದಂತೆ ರಾಜ್ಯದ ಹಲವು ನಾಯಕರಿಗೆ ಆಹ್ವಾನ ನೀಡಲಾಗಿದೆ .

ಈ ಕುರಿತು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಂತ ರಾಜಗೋಪಾಲ ಮಾತನಾಡಿ ನಮ್ಮ ತಂಡದ ಸತತ ಪರಿಶ್ರಮದಿಂದಾಗಿ ಫೆಬ್ರುವರಿ 14 ರಂದು ನೆಡೆಯುವ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಭಾಗವಹಿಸುವ ಭರವಸೆ ನೀಡಿದ್ದಾರೆ ಸಚಿವರು ಹಾಗೂ ಶಾಸಕರಾದ ಜಮೀರ್ ಅಹಮ್ಮದ್, ಕೆ ಹೆಚ್ ಮುನಿಯಪ್ಪ, ಯಲಹಂಕ ಶಾಸಕರಾದ ಎಸ್. ಆರ್. ವಿಶ್ವನಾಥ್ ಸೇರಿದಂತೆ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ನಮ್ಮ ಅರೆಸೇನಾ ಪಡೆಗಳ ಮಾಜಿ ಯೋಧರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷ ಸಂಗತಿಯಾಗಿದೆ .ಈ ವೇದಿಕೆಯಲ್ಲಿ ಪ್ಯಾರಾ ಮಿಲಿಟರಿ ಮಾಜಿ ಯೋಧರ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು

ಕಾರ್ಯಕ್ರಮ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಮಾತನಾಡಿ ಕಾರ್ಯಕ್ರಮದಲ್ಲಿ ಅರೆಸೇನಾ ಪಡೆಗಳ ಮಾಜಿ ಯೋಧರು 17000ಕ್ಕು ಹೆಚ್ಚು ಭಾಗವಹಿಸುವ ನಿರೀಕ್ಷೆ ಇದ್ದು .ರಾಜ್ಯದ ಇತಿಹಾಸದಲ್ಲಿ ಇದೊಂದು ಬೃಹತ್ ಸಮಾವೇಶವಾಗಲಿದೆ .ನಮ್ಮ ಮಾಜಿ ಯೋಧರ ಕಷ್ಟ ಹಾಗೂ ಬೇಡಿಕೆಗಳನ್ನು ಸರ್ಕಾರಕ್ಕೆ ಮುಟ್ಟಿಸುವಲ್ಲಿ ಈ ಸಮಾವೇಶ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *