Doddaballapur : ದೇವಾಲಯ ನಿರ್ಮಾಣ ಮಾಡಿ 2 ವರ್ಷವಾಗಿದೆ . ಸಾವಿರಾರು ಭಕ್ತಾದಿಗಳು ದಿನನಿತ್ಯ ತಾಯಿಯ ದರ್ಶನ ಪಡೆಯುತ್ತಿದ್ದಾರೆ .ನಿತ್ಯ ಅನ್ನದಾಸೋಹ ಕಾರ್ಯಕ್ರಮ ನಡೆಯುತ್ತಿದ್ದು ದಿನದಿಂದ ದಿನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ನಾರಾಯಣಪ್ಪ ತಿಳಿಸಿದರು

ದೊಡ್ಡಬಳ್ಳಾಪುರ ತಾಲ್ಲೂಕಿನ ಆಡೋನಳ್ಳಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಚೌಡೇಶ್ವರಿ ದೇವಸ್ಥಾನದ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿಶೇಷವಾಗಿ ಸಾಮೂಹಿಕ ಕುಂಕುಮಾರ್ಚನೆ , ಭಜನೆ, ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ದೇವಾಲಯದ ಆಡಳಿತ ಮಂಡಳಿ ಹಮ್ಮಿಕೊಂಡಿದೆ ಈ ಕುರಿತು ಮಾತನಾಡಿದ ಅವರು ದೇವಾಲಯದ ನಿರ್ಮಾಣದ ಹಿಂದೆ ಸ್ಥಳೀಯ ಮುಖಂಡರಾದ ಅಪ್ಪಯ್ಯಣ್ಣ ಸೇರಿದಂತೆ ಹಲವರ ಶ್ರಮ ನೆನಪಾಗುತ್ತದೆ .ಇದು ಈ ಕ್ಷೇತ್ರ ಪ್ರಸಿದ್ಧಿ ಪಡೆದುಕೊಳ್ಳುತ್ತಿದೆ ದಿನಕ್ಕೆ ಸಾವಿರಾರು ಭಕ್ತಾದಿಗಳು ದೇವಾಲಯಕ್ಕೆ ಭೇಟಿ ಕೊಡುತ್ತಿರುವುದು ಸಂತಸ ತಂದಿದೆ.ನಿತ್ಯ ಅನ್ನದಾಸೋಹ ಸದಾ ವಿಶೇಷ ಪೂಜಾ ಕಾರ್ಯಗಳು ಅಮಾವಾಸ್ಯೆ ಹುಣ್ಣಿಮೆ ದಿನದಂದು ವಿಶೇಷ ಅಲಂಕಾರಗಳ ಸಹಿತ ಪೂಜೆ ಈ ದೇವಾಲಯದ ವೈಶಿಷ್ಟ್ಯವಾಗಿದೆ ಎಂದು ತಿಳಿಸಿದರು

ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ ವರ್ಷದಲ್ಲಿ ಹಲವಾರು ಬಾರಿ ಈ ದೇವಾಲಯಕ್ಕೆ ಭೇಟಿ ಕೊಟ್ಟು ತಾಯಿ ಆಶೀರ್ವಾದ ಪಡೆದುಕೊಳ್ಳುತ್ತೇವೆ. ದೇವಾಲಯದ ಅಡಳಿತ ಮಂಡಳಿ ದೇವಾಲಯದ ಕಾರ್ಯಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು . ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ.2 ನೇ ವಾರ್ಷಿಕೋತ್ಸವದ ಅಂಗವಾಗಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ದೇವಾಲಯ ಆಡಳಿತ ಮಂಡಳಿ ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆ ಕಾಪಾಡುವಲ್ಲಿ ಯಶಸ್ವಿಯಾಗಿ ಶ್ರಮಿಸುತ್ತಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು .
