
ದೊಡ್ಡಬಳ್ಳಾಪುರ ತಾಲೂಕಿನ ನೆಲಮಂಗಲ ಹೆದ್ದಾರಿಯ ಕಾಡನೂರು ಕೈಮರ ಮಾರ್ಗದಲ್ಲಿ ಸರಕು ಸಾಗಣೆ ಮಾಡುವ ಎರಡು ಟಾಟಾ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ . ವಾಹನಗಳ ರಭಸಕ್ಕೆ ಗಾಡಿಗಳ ಮುಂಭಾಗ ಸಂಪೂರ್ಣ ಹಾಳಾಗಿದ್ದು ಓರ್ವ ಚಾಲಕನಿಗೆ ಕಾಲು ಮುರಿದಿದೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸರಕು ಸಾಗಣೆ ಮಾಡುವ ವಾಹನಗಳು ಅತ್ಯಂತ ವೇಗವಾಗಿ ಚಲಾಯಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಮುಖಮುಖಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ . ಸ್ಥಳೀಯ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಯಾವುದೇ ಸಾವಾಗಿಲ್ಲ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲು ಮುಂದಾಗಿದ್ದಾರೆ
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .