
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೌಡಿ ಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ರಾಜಕೀಯ ಸಮಾರಂಭಗಳು, ರಾಜಕೀಯ ಮಾಡುವ ವೇಳೆ ಕಾನೂನು ಬಾಹಿರ, ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮಾಂತರ ಠಾಣಾ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದರು.
ಜೀವನದಲ್ಲಿ ಬದಲಾವಣೆ ಸಹಜ ಹೀಗಾಗಿ ಭವಿಷ್ಯದಲ್ಲಿ ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತ್ಯಜೀಸಿ ಉತ್ತಮ ನಾಗರಿಕರಾಗಿ ಜೀವನ ಮಾಡಬೇಕು ಎಂದು ತಿಳಿಸಿದರು.
ರೌಡಿ ಶೀಟರ್ ಪಟ್ಟಿಯಿಂದ ನಮ್ಮನ್ನು ತೆಗೆಯಿರಿ ಎಂದು ಕೇಳುವ ಬದಲು.. ನಾವು ಬದಲಾಗಿದ್ದೇವೆ ಎಂದು ನೀವೆ ಪೊಲೀಸ್ ಅಧಿಕಾರಿಗಳನ್ನು ಕೇಳುವಂತಾಗಬೇಕು. ರೌಡಿಯಿಸಂ ಜೀವನವನ್ನು ಹಾಳು ಮಾಡುವುದಲ್ಲದೆ ಜೀವನ ಪರ್ಯಂತ ರೌಡಿಶೀಟರ್ ಪಟ್ಟ ಕಟ್ಟಿಕೊಂಡು ಬದುಕಬೇಕಾಗುತ್ತದೆ. ಆದರೆ ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬಹುದು. ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು
ಹೀಗೆ ಮುಂದುವರೆದರೆ ಜಿಲ್ಲೆಯಿಂದಲೇ ಗಡಿಪಾರು ಮಾಡಲಾಗುವುದು. ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಸ್ಥರು ಗೌರವ ನೀಡುವಷ್ಟು ರೀತಿಯಲ್ಲಿಯಾದರೂ ಜೀವನ ಮಾಡಿ.
ಚುನಾವಣಾ ಸಂಧರ್ಬವಾಗಿರುವುದರಿಂದ ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆ ಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ. ಮಾದರಿ ಜೀವನ ನಡೆಸಿದರೆ ರೌಡಿ ಶೀಟರ್ ಬಂದ್ ಮಾಡಲಾಗುವುದು ಎಂದರು. ರೌಡಿಶೀಟರ್ ಗಳ ಜೀವನ ಶೈಲಿ ಸರಿ ಹೋದರೆ ಕೇವಲ ಎರಡು ತಿಂಗಳಲ್ಲಿ ರೌಡಿ ಶೀಟರ್ ಪಟ್ಟದಿಂದ ಮುಕ್ತಿಕಾಣಿಸಲಾಗುವುದು. ಮುಂದುವರೆದಿರೆ ಮತ್ತೊಂದು ಕೇಸ್ ಓಪನ್ ಆಗುತ್ತದೆ. ಎರಡ್ಮೂರು ತಿಂಗಳಿಗೆ ಮತ್ತೊಮ್ಮೆ ಪರಾಮರ್ಶೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ರಾಮಚಂದ್ರಯ್ಯ,ಉದಯ್ ಕುಮಾರ್, ರಂಗಸ್ವಾಮಿ, ರಂಗನಾಥ, ಅರ್ಜುನ್ ಲಮಾಣಿ, ಮುತ್ತುರಾಜು ಮತ್ತಿತ್ತರರು ಉಪಸ್ಥಿತರಿದ್ದರು .