
ದೊಡ್ಡಬಳ್ಳಾಪುರ :ತಾಲ್ಲೂಕಿನ ತೂಬಗೆರೆ ಹೋಬಳಿಯಿಂದ ಬೆಂಗಳೂರಿಗೆ ಪ್ರಯಾಣಿಸಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ನಿಗಮದಿಂದ ನೂತನ ಸಂಚಾರವನ್ನು ಆರಂಭಿಸಿದೆ ಎಂದು ಕೆಪಿಸಿಸಿ ಸದಸ್ಯ ಎಸ್. ಆರ್.ಮುನಿರಾಜು ತಿಳಿಸಿದರು.
*ಹೈಮಾಸ್ಟ್ ದೀಪಗಳಿಗೆ ಚಾಲನೆ*
ತೂಬಗೆರೆ ಬಸ್ ನಿಲ್ದಾಣದಲ್ಲಿ 10 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಐ ಮಾಕ್ಸ್ ದೀಪಗಳಿಗೆ ಚಾಲನೆ ನೀಡಲಾಯಿತು.
*ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ :*
ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಈಗಾಗಲೇ 3 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು. ಜನಸಾಂದ್ರತೆ ಹೆಚ್ಚಿರುವ ಕಾರಣ ನೂತನ ಕುಡಿಯುವ ನೀರಿನ ಘಟಕವನ್ನು ತೂಬಗೆರೆ ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ಸಮೀಪ ಉದ್ಘಾಟನೆ ಮಾಡಲಾಗುತ್ತಿದೆ ಎಂದು ಸ್ಥಳಿಯ ಮುಖಂಡರು ತಿಳಿಸಿದರು.
ತೂಬಗೆರೆಯಲ್ಲಿ ಹಮ್ಮಿಕೊಂಡಿದ್ದ ನೂತನ ಕೆ ಎಸ್ ಆರ್ ಟಿ ಸಿ ಬಸ್ ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು ನಾವು ಚಿಕ್ಕವರಿದ್ದಾಗಿನಿಂದಲೂ ತೂಬಗೆರೆಯಿಂದ ಬೆಂಗಳೂರಿಗೆ ಕೇವಲ ಒಂದು ಬಸ್ ವ್ಯವಸ್ಥೆ ಇತ್ತು. ಕೊರೋನ ಸಂದರ್ಭದಲ್ಲಿ ಕಾರಣಾಂತರಗಳಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ನಿಲ್ಲಿಸಲಾಗಿತ್ತು. ತೂಬಗೆರೆ ಹೋಬಳಿಯ ಜನತೆಗೆ ಬಸ್ ನ ಅವಶ್ಯಕತೆ ಇದ್ದು ಗ್ರಾಮಸ್ಥರ ಮನವಿ ಮೇರೆಗೆ ಈ ಮಾರ್ಗವಾಗಿ ಬಸ್ ಸಂಚಾರಕ್ಕೆ ಮರುಜೀವ ನೀಡಲಾಗಿದೆ. ತೂಬಗೆರೆಯಲ್ಲಿ ಕಾರ್ಯರೂಪಕ್ಕೆ ಬಾರದ ಹಲವು ಅಭಿವೃದ್ಧಿ ಕಾರ್ಯಗಳು
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ಹಾಗೂ ಮಾಜಿ ಸಂಸದ ವೀರಪ್ಪ ಮೊಯಿಲಿಯವರ ಸಹಕಾರದಿಂದ
ಪೂರ್ಣಗೊಂಡಿವೆ. ಇದರ ಅನುಕೂಲತೆಗಳನ್ನು ಜನತೆ ಪಡೆಯುವಂಥಾಗಿದೆ ಎಂದರು.
ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ ಮಾತನಾಡಿ ಈ ಹಿಂದೆ ಕೇವಲ ಭರವಸೆಗಳಿಗೆ ಸೀಮಿತವಾಗಿದ್ದ ನಮ್ಮ ತೂಬಗೆರೆ ಈಗ ಅಭಿವೃದ್ಧಿಯ ಪಥದಲ್ಲಿ ಸಾಗಿದೆ. ನಿಂತು ಹೋಗಿದ್ದ ಬಸ್ ಮರಳಿ ನಮ್ಮ ಹೋಬಳಿಗೆ ಲಭಿಸಿರುವುದು ಸಂತಸದ ಸಂಗತಿ. ನೂತನ ಬಸ್ ವ್ಯವಸ್ಥೆಯಿಂದಾಗಿ ಹಲವು ಗ್ರಾಮಗಳ ಗ್ರಾಮಸ್ಥರಿಗೆ ಅನುಕೂಲವಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರವಿಂದ್ ಮಾತನಾಡಿ
ತೂಬಗೆರೆ ಬಸ್ ನಿಲ್ದಾಣದಲ್ಲಿ ಸ್ವಯಂ ಚಾಲಿತ ಹೈಮಾಸ್ಟ್ ದೀಪಗಳಿಗೆ ಚಾಲನೆ ನೀಡಲಾಗಿದೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಗಿದೆ. ಸ್ಥಳೀಯ ಮುಖಂಡರ ಶ್ರಮ ಹಾಗೂ ಹಿರಿಯ ನಾಯಕರ ಸಹಕಾರ ತೂಬಗೆರೆ ಹೋಬಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕಾರಣವಾಗಿದೆ. ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು
ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಸದಸ್ಯ ಎನ್, ಅರವಿಂದ, ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜಮ್ಮ ನರಸಿಂಹಮೂರ್ತಿ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ಸಿದ್ದಪ್ಪ, ಡಿಪೋ ಮ್ಯಾನೇಜರ್ ನಟರಾಜ್,ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ವಿ ವೆಂಕಟೇಶ್,ಮುನಿಕೃಷ್ಣಪ್ಪ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಅಂಜಿನಪ್ಪ ಕಾಂಗ್ರೆಸ್ ಮುಖಂಡರಾದ ದೇವೇಂದ್ರಪ್ಪ ಊರಿನ ಮಹಿಳೆಯರು ಹಾಜರಿದ್ದರು,