
ಕರ್ನಾಟಕ ಯಾದವ ಯುವ ವೇದಿಕೆ ರಾಜ್ಯ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ಭೂಮೇನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಗ್ರಾಮದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಸಂಗೀತ ಕುರ್ಚಿ, ಬಾಟಲಿಗೆ ನೀರು ತುಂಬಿಸುವ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಸ್ಪರ್ಧೆಯಲ್ಲಿ ಜಯಗಳಿಸಿದ ಹಾಗೂ ಭಾಗಿಯಾದ ಎಲ್ಲಾ ಮಹಿಳೆಯರಿಗೂ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಮಾಜಿ ಸದಸ್ಯರು, ವಕೀಲರು ಆದ ಕಣಿವೇಪುರ ಸುನಿಲ್ ಕುಮಾರ್ ಮಾತನಾಡಿ ನಮ್ಮ ವೇದಿಕೆ ವತಿಯಿಂದ ರಾಜ್ಯಾದ್ಯಂತ ಸಮುದಾಯದ ಸಂಘಟನೆ ಮಾಡುತ್ತಾ ಸಮುದಾಯದಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸುವ ಪ್ರಯತ್ನ ನೆಡೆಸುತ್ತಿದ್ದೇವೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸುವ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು ವೇದಿಕೆಯು ಇನ್ನು ಹೆಚ್ಚಿನ ರೀತಿಯಲ್ಲಿ ಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಇನ್ನಷ್ಟು ಸೇವೆಯನ್ನು ನೀಡಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷರಾದ ರಾಜೇಶ್ವರಿ ಯಾದವ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಹೆಣ್ಣು ಆಬಲೆಯಲ್ಲ ಸಬಲೇಯಾಗಿದ್ದಾಳೆ ಎಂದು ತೋರಿಸುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಎಲ್ಲಾ ರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಹೆಣ್ಣಿಗೆ ಸೇವೆ ಸಲ್ಲಿಸಲು ಎಲ್ಲಾ ಹಂತದಲ್ಲಿ ಪುರುಷರು ಸಹಕಾರ ನೀಡಬೇಕಿದೆ ಹಾಗೂ ಹೆಣ್ಣು ಮಕ್ಕಳು ಮೂಡನಂಬಿಕೆಗಳಿಂದ ಹೊರಬಂದು ತಮ್ಮ ಕುಟುಂಬವನ್ನು ಸದೃಢವಾಗಿ ನಿರ್ವಹಿಸಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು .
ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಸುಧಾಕರ್ ಯಾದವ್, ಕಾನೂನು ಘಟಕದ ಅಧ್ಯಕ್ಷರಾದ ಮುನಿರಾಜ್, ಕಾರ್ಮಿಕರ ಘಟಕದ ಅಧ್ಯಕ್ಷರಾದ ವೇಣು ಯಾದವ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಯಾದವ್ ಕೆ ಸಿ, ಭೂಮೇನಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಪಿಲ್ಲಣ್ಣ, ಮುನಿರಾಜ್, ರಾಜ್ಯದ ಯಾದವ ಯುವ ಮುಖಂಡರು ಹಳ್ಳಿ ರೈತ ಅಂಬರೀಶ್ , ಕೃಷ್ಣ,ಬಾಬು, ಅನಿಲ್, ನರಸಿಂಹಮೂರ್ತಿ,ರಾಜ್ಯ ಮಹಿಳಾ ಘಟಕದ ಕಾರ್ಯಧ್ಯಕ್ಷರಾದ ತೇಜಸ್ವಿನಿ ಯಾದವ್ , ಅನಿತಾ, ನಾಗರತ್ನ, ಮಂಜುಳಾ, ಸುಜಾತ, ದಿವ್ಯ ಸೇರಿದಂತೆ ಎಲ್ಲಾ ಮಹಿಳಾ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.