
ದೊಡ್ಡಬಳ್ಳಾಪುರ ಮಾ.16 (ವಿಜಯಮಿತ್ರ ):ತಾಂತ್ರಿಕ ಕಾರಣದಿಂದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸ್ವಲ್ಪ ಹಿನ್ನಡೆಯಾಗಿದೆ, ನಮ್ಮ ಪ್ರಾಧಿಕಾರ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕೆಲಸ ಮಾಡುವುದು, ಯೋಜನೆಗಳ ಫಲಾನುಭವಿಗಳಾಗಲು ನಮ್ಮ ಪ್ರಾಧಿಕಾರವನ್ನ ಸಂಪರ್ಕಿಸಿದ್ದಾರೆ ಯೋಜನೆಯ ಫಲಾನುಭವಿಗಳನ್ನಾಗಿ ಮಾಡಲಾಗುವುದು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ತಿಳಿಸಿದರು.
ನಗರ ಭಾಗದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧಿಕಾರ ಸ್ವೀಕಾರ ಮತ್ತು ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಕೆಪಿಸಿಸಿ ವಕ್ತಾರರಾದ ಜಿ.ಲಕ್ಷ್ಮೀಪತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ವೆಂಕಟೇಶ್ (ಅಪ್ಪಿ ), ಆದಿತ್ಯ ನಾರಾಯಣ್, ಅಂಜನ್ ಮೂರ್ತಿ ಸೇರಿದಂತೆ ತಾಲ್ಲೂಕಿನ ಹಲವು ಮುಖಂಡರು ಭಾಗವಹಿಸಿ ನೂತನ ಅಧ್ಯಕ್ಷರಿಗೆ ಶುಭಕೋರಿದರು.
ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವನ್ನು ಜಾರಿ ಮಾಡಲಾಗಿದ್ದು, ದೊಡ್ಡಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ವಿಶ್ವನಾಥ್ ರೆಡ್ಡಿ ಇಂದು ಅಧಿಕಾರ ಸ್ವೀಕರಿಸಿದರು ಜೊತೆಗೆ ಪ್ರಾಧಿಕಾರದ 15 ಸದಸ್ಯರ ಪದಗ್ರಹಣ ಸಹ ನಡೆಯಿತು.
ಅಧ್ಯಕ್ಷರಾದ ವಿಶ್ವನಾಥ್ ರೆಡ್ಡಿ ಮಾತನಾಡಿ ರಾಜ್ಯದ ಬಡವರು ಸ್ವಾವಲಂಬಿ ಜೀವನ ನೆಡೆಸಲು ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ, ಅಸಮಾನತೆ ಮತ್ತು ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗಿದ್ದು, ಈ ಮೂಲಕ ಬಡವರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ,ಜೊತೆಗೆ ಕುಟುಂಬ ನಿರ್ವಹಣೆ ಸಮರ್ಪಕ ರೀತಿಯಲ್ಲಿ ಮಾಡಲು ಸಹಕರಿಯಾಗಿದೆ.
ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರು ಸರ್ಕಾರದ ನಾಲ್ಕು ನಿಗಮಗಳ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು, ಪ್ರಯಾಣಕ್ಕೆ ಖರ್ಚಾಗುತ್ತಿದ್ದ ಹಣ ಉಳಿತಾಯ ವಾಗುವುದರಿಂದ, ಉಳಿಕೆಯ ಹಣ ಕುಟುಂಬದ ನಿರ್ವಹಣೆಗೆ ಸಹಕಾರಿಯಾಗಿದೆ.ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ಬೆಲೆ ಏರಿಕೆಯಿಂದ ಕುಟುಂಬ ನಿರ್ವಹಣೆಗೆ ಕಷ್ಟಪಡುತ್ತಿದ್ದ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ನೀಡಲಾಗುತ್ತಿದೆ.ಗೃಹಜ್ಯೋತಿ ಯೋಜನೆಯಿಂದ ಪ್ರತಿ ಮನೆಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದೆ, ಯುವನಿಧಿ ಯೋಜನೆಯಿಂದ ವಿದ್ಯಾಭ್ಯಾಸ ಮುಗಿಸಿ ನಿರುದ್ಯೋಗಸಮಸ್ಯೆ ಎದುರಿಸುತ್ತಿರುವ ಯುವಕರಿಗೆ ಉದ್ಯೋಗ ಸಿಗುವ ತನಕ ಪ್ರತಿ ತಿಂಗಳು ಹಣ ನೀಡಲಾಗುತ್ತಿದೆ ಎಂದರು.
ಕೆಪಿಸಿಸಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ವಕ್ತರರಾದ ಜಿ.ಲಕ್ಷ್ಮೀಪತಿ ಮಾತನಾಡಿ ರಾಜ್ಯ ಸರ್ಕಾರದ ಉತ್ತಮ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಮನೆ ಮನೆಗೆ ತಲುಪಿಸುವ ಅವಕಾಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಲ್ಪಿಸಿದ್ದು ಈ ಅವಕಾಶವನ್ನು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬಿಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಚುಂಚೇ ಗೌಡ ಮಾತನಾಡಿ ಪಕ್ಷದ ನಾಯಕರು ಹಾಗೂ ಹಿರಿಯ ಮುಖಂಡರು ನೀಡಿರುವ ಜವಾಬ್ದಾರಿಯನ್ನು ವಿಶ್ವನಾಥ್ ರೆಡ್ಡಿ ಮತ್ತು ತಂಡ ಉತ್ತಮ ರೀತಿಯಲ್ಲಿ ನಿರ್ವಹಿಸುವ ಮೂಲಕ ತಮ್ಮ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳನ್ನು ಪ್ರತಿ ಕುಟುಂಬಕ್ಕೆ ತಲುಪಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ತಾ.ಪಂ ಇಒ ಮುಜಿರಾಜು, ಡಿಪಿಎ ಅಧ್ಯಕ್ಷ ಚುಂಚೇಗೌಡ, ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಮುಖಂಡರಾದ ಜಗದೀಶ್ ರೆಡ್ಡಿ, ಅಲ್ತಾಫ್, ಕಿಟ್ಟಿ, ರಾಜಗೋಪಾಲ್, ಕೆಂಪಣ್ಣ, ಅಣ್ಣಯ್ಯಪ್ಪ, ಆರೂಢಿ ವೆಂಕಟೇಶ್ ಮತ್ತಿತ್ತರು ಇದ್ದರು