
ದೊಡ್ಡಬಳಾಪುರ ಮೇ14( ವಿಜಯಮಿತ್ರ ) : ತೊಂಡೇಬಾವಿ ಮತ್ತು ಗೌರಿಬಿದನೂರು ರೈಲು ನಿಲ್ದಾಣಗಳ ಮಧ್ಯೆ ಹನುಮೇನಹಳ್ಳಿ ಹತ್ತಿರ ಅಪರಿಚಿತ ಗಂಡಸು ಸುಮಾರು 35 ವರ್ಷದವನು ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಯಶವಂತಪುರ ರೈಲ್ವೆ ಪೋಲಿಸ್ ಠಾಣೆ ಯು.ಡಿ ಆರ್.ನಂ. 90/2024 ಕಲಂ 174 Cr.P.C ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡಿದ್ದು ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.
*ಚಹರೆ* – 5.5ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ತಲೆಯಲ್ಲಿ ಸುಮಾರು 1 ಇಂಚು ಉದ್ದದ ಕಪ್ಪು ಕೂದಲು,ದುಂಡು ಮುಖ ಇದ್ದು ಸಾಧಾರಣವಾದ ಮೈಕಟ್ಟು,ಹೊಂದಿರುತ್ತಾರೆ ಕಪ್ಪು ಗಡ್ಡ ಮೀಸೆ ಹೊಂದಿರುತ್ತಾನೆ.ಬಲಕೈ ಮೇಲೆ ಪ್ರಕಾಶ ಎದೆಯ ಮೇಲೆ S ಎಂದು,ಎಡಕೈ ಮೇಲೆ ಪರಮೇಶ್,ಅಮ್ಮ ಎಂಬ ಹಚ್ಚೆ ಗುರುತು ಇರುತ್ತದೆ.
*ಬಟ್ಟೆಗಳು* – ಬಿಳಿ ಬಣ್ಣದ ಟೀ ಶರ್ಟ್ ನೀಲಿ ಬಣ್ಣ ಹರಿದ ಜೀನ್ಸ್ ಪ್ಯಾಂಟ್ ಕಾಪಿ ಕಲರ್ ಅಂಡರ್ವೆರ್ ಇದ್ದು ವಾರಸುದಾರರು ಯಾರಾದರು ಕಂಡು ಬಂದಲ್ಲಿ ರೈಲ್ವೆ PSI 9480802118/ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ 9480802143, ಸಂಪರ್ಕಿಸಲು ಕೋರಿದೆ.