
ಬೆಂಗಳೂರು ಗ್ರಾಮಾಂತರ ಜಿಲ್ಲೆ (ವಿಜಯಮಿತ್ರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಇಂದು ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಕಾರ್ಯಾಗಾರದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ನುಡಿದರು.
ಕಾರ್ಯಾಗಾರದಲ್ಲಿ ಜೆ.ಗುಣವಂತ, ತೋಟಗಾರಿಕೆ ಉಪನಿರ್ದೇಶಕರು,ಉಪ ನಿರ್ದೇಶಕರು ರೇಷ್ಮೆ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು,ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್, ಮುನಿರಾಜು, ಮಧು, ಮಂಜುನಾಥ್ ರವರು ಉಪಸ್ಥಿತರಿದ್ದರು.ಕೆ.ವಿ.ಕೆ.ಯ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಿ.ಸ.ತೋ.ನಿ ಹಾಗೂ ಹರ್ಷವರ್ಧನ್ ,ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು. ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.