
ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) : ತಾಲ್ಲೂಕಿನ ರೋಜಿಪುರ ದಲ್ಲಿ ತಂಬಾಕು ವಿರೋಧಿ ದಿನಾಚರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಆಚರಿಸಲಾಯಿತು.
ಯೋಜನೆಯ ತಾಲ್ಲೂಕು ಯೋಜನಾಧಿಕಾರಿಗಳಾದ ಸುಧಾ ಭಾಸ್ಕರ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯುವ ಜನತೆ ತಂಬಾಕು ಮಾದಕ ವಸ್ತುಗಳ ಸೇವನೆಯಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು ,ಮನೆಗೆ ಆಸರೆಯಾಗ ಬೇಕಿದ್ದ ಮಕ್ಕಳು ಕ್ಯಾನ್ಸರ್ ನಂತಹ ಮಾರಕ ರೋಗಕ್ಕೆ ತುತ್ತಾಗಿ ಮರಣ ಹೊಂದುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ// ವೀಣಾ ಮಾತನಾಡಿ ತಂಬಾಕಿನಿಂದ ಸಮಾಜಕ್ಕೆ ಆಗುವ ದುಷ್ಟಪರಿಣಾಮಗಳ ಬಗ್ಗೆ ತಿಳಿಸಿದರು ಯುವ ಜನತೆ ತಂಬಾಕು ಸೇವನೆಯಿಂದ ಕ್ಯಾನ್ಸರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ತಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಾದಕ ವಸ್ತುಗಳ ಸೇವನೆ ಹಾಗೂ ತಂಬಾಕಿನಿಂದ ದೂರ ಉಳಿಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯರಾದ ನಾಗೇಶ್ , ನಿವೃತ್ತ ಪ್ರಾಂಶುಪಾಲರಾದ ಮಹಾಲಿಂಗಯ್ಯ , ವಲಯದ ಮೇಲ್ವಿಚಾರಕರಾದ ಗಿರೀಶ್ , ತಾಲೂಕಿನ ಸಮನ್ವಯ ಅಧಿಕಾರಿ ಛಾಯ, ಸೇರಿದಂತೆ ಹಲವು ಸೇವಾಪ್ರತಿನಿಧಿಗಳು ಸಂಘದ ಸದಸ್ಯರು ಉಪಸ್ಥಿತರಿದ್ದರು.