
ಬೆಂಗಳೂರು : ನಟ ದರ್ಶನ್ ಅಭಿಮಾನಿಗಳಿಂದ ತನಗೆ ಜೀವ ಬೆದರಿಕೆ ಬಂದಿದೆ ಎಂದು ನಟ ಪ್ರಥಮ್ ಅವರು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಥಮ್, ಜೀವನ ಬಹಳ ದೊಡ್ಡದು. ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ, ನಾನು ತುಂಬಾ ಶಾಂತಿಯಿಂದಲೇ ಇದ್ದೆ:ನೀವು ಅತೀಯಾಗಿ ನಮ್ಮ ಕರ್ನಾಟಕದ ಅಳಿಯ ತಂಡದ ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ, ಇನ್ನೇಲೆ ನನಗೆ ಬರೋ ಕಾಲ್ ಅಥವಾ ಎಲ್ಲವೂ ಪೋಲೀಸರು ನೋಡಿಕೊಳ್ತಾರೆ. ಬದುಕು ಸುಂದರವಾದದ್ದು. ಅಂಧಾಭಿಮಾನಿಗಳೇ, ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ, ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ. ಕನ್ನಡಕ್ಕಾಗಿ,ಕಾವೇರಿಗಾಗಿ,ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ : ಯಾರಿಗೋಸ್ಕರವೋ ಲೈಪ ಹಾಳುಮಾಡಿಕೊಳ್ಳಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.