
ದೊಡ್ಡಬಳ್ಳಾಪುರ : ಲೋಕಸಭಾ ಚುನಾವಣೆ ನಿಮಿತ್ತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ದಕ್ಷ ಪೊಲೀಸ್ ಅಧಿಕಾರಿಗಳಾದ ಎ.ಅಮರೇಶ್ ಗೌಡ ರವರು ಮತ್ತೆ ದೊಡ್ಡಬಳ್ಳಾಪುರ ನಗರ ಠಾಣಾ ನಿರೀಕ್ಷಕರಾಗಿ ಇಂದು (ಜುಲೈ04) ಮತ್ತೆ ಅಧಿಕಾರ ಸ್ವೀಕರಿಸಿದರು.
ನಗರ ಠಾಣಾ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ ಇನ್ಸ್ಪೆಕ್ಟರ್ ದಯಾನಂದ ಅವರು ನೂತನ ನೀರಿಕ್ಷಕರಾದ ಎ.ಅಮರೇಶ್ ಗೌಡ ರವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ಉಪಸ್ಥಿತರಿದ್ದರು.