
ದೊಡ್ಡಬಳ್ಳಾಪುರ: ತಾಲ್ಲೂಕಿನ ರಘುನಾಥಪುರ ಗ್ರಾಮದ ನೀರು ಸ್ಥಳೀಯ ಖಾಸಗಿ ಕಾರ್ಖಾನೆಯ ತ್ಯಾಜ್ಯ ವಸ್ತುಗಳೊಂದಿಗೆ ಸೇರಿ ತನ್ನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ನೀಡಿದ ದೂರಿನ ಹಿನ್ನೆಲೆ ಬುಧವಾರ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನೆಡೆಸಿದರು.
ನೀರಿನ ಗುಣಮಟ್ಟ ತಿಳಿಯಲು ಊರಿನ ಕೆರೆ, ಕೊಳವೆ ಬಾವಿ ಸೇರಿದಂತೆ ಹಲವು ಜಲಮೂಲಗಳಿಂದ ನೀರಿನ ಸ್ಯಾಂಪಲ್ ಸಂಗ್ರಹಿಸಿದರು.
ಅಧಿಕಾರಿಗಳ ಭೇಟಿಗೆ ಕಾರಣವೇನು…??
ರಘುನಾಥಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡೇನಾ ಕಾರ್ಖಾನೆಯಿಂದ ತ್ಯಾಜ್ಯ ನೀರು ಭೂಮಿ ಸೇರುತ್ತಿದೆ. ಆದಕಾರಣ ಜಲಸಂಪನ್ಮೂಲಗಳು ಸಂಪೂರ್ಣ ಕಲುಷಿತವಾಗುತ್ತಿದೆ ಎಂದು ಆರೋಪಿಸಿ ಈ ಹಿಂದೆ ಊರಿನ ಯುವಕರು ಕಾರ್ಖಾನೆ ವಿರುದ್ಧ ಪ್ರತಿಭಟನೆ ನಡೆಸಿದರು. ಆದರೆ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಗ್ರಾಮಸ್ಥರು ದೂರು ನೀಡಿರುವ ಕಾರಣ ರಘುನಾಥಪುರಕ್ಕೆ ಅಧಿಕಾರಿಗಳು (ಜುಲೈ 10 )ಇಂದು ಭೇಟಿ ನೀಡಿ ಪರಿಶೀಲನೆ ನೆಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು, ಉಪಸ್ಥಿತರಿದ್ದರು.