
ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಜ್ಯದ ಕಂಪನಿಗಳು ಕೈಗಾರಿಕಾಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿ ಕಡ್ಡಾಯ ಗೊಳಿಸ ಬೇಕೆಂಬ ಕರವೇ ಹೋರಾಟಕ್ಕೆ ಜಯ ಸಿಕ್ಕಿದೆ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕುರಿತು ಸಚಿವ ಸಂಪುಟ ದಲ್ಲಿ ಅನುಮತಿ ನೀಡಿದ್ದು ಸ್ವಾಗತಾರ್ಹ ವಿಷಯವಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ತಿಳಿಸಿದ್ದಾರೆ .
ಜುಲೈ 1 ರಂದು ಕರವೇ ಟಿ ಎ ನಾರಾಯಣ ಗೌಡರ ನೇತೃತ್ವದ ಹೋರಾಟದ ಪ್ರತಿಫಲವೇ ಸರ್ಕಾರದ ಇಂದಿನ ನಿರ್ಧಾರಕ್ಕೆ ಕಾರಣ ಎಂದರು.
ಸರ್ಕಾರದ ಈ ನಿರ್ಧಾರವು ಕನ್ನಡಿಗರ ಹಿತ ಕಾಪಾಡಿದಂತಾಗಿದೆ. ನಮ್ಮ ರಾಜ್ಯದ ಜನರು ಉದ್ಯೋಗಕ್ಕೆ ಬೇರೆ ರಾಜ್ಯಕ್ಕೆ ವಲಸೆ ಹೊಗುವ ಪರಿಸ್ಥಿತಿ ಎದುರಾಗಿದ್ದು, ಕನ್ನಡಿಗರಿಗೆ ಇದೊಂದು ಮಹತ್ವದ ತೀರ್ಮಾನವಾಗಿದೆ ಎಂದು ತಿಳಿಸಿದ್ದಾರೆ.