
ದೊಡ್ಡಬಳ್ಳಾಪುರ ದರ್ಗಾಜೋಗಿಹಳ್ಳಿ : ಬ್ಯಾಂಕ್ ಆಫ್ ಬರೋಡ ಸಂಸ್ಥೆಯ 117ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಹಾಗೂ ಪೆನ್ನು ಗಳ ವಿತರಣೆ ಮಾಡಿದ್ದೇವೆ ಎಂದು ದೊಡ್ಡಬಳ್ಳಾಪುರ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಾದ ವಿನೋದ್ ಕುಮಾರ್ ತಿಳಿಸಿದರು.
1,576 ನೇ ದಿನದ ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಅನ್ನದಾಸೋಹಿ ಮಲ್ಲೇಶ್ ಸತತವಾಗಿ ನಮ್ಮೊಂದಿಗೆ ಸಂಪರ್ಕದಲ್ಲಿದ್ದು ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಶ್ಯಕತೆ ಇರುವ ಸಾಮಗ್ರಿಗಳನ್ನು ನೀಡುವಂತೆ ಮನವಿ ಮಾಡಿದ್ದರು. ಈ ಸಂಬಂಧ ಬ್ಯಾಂಕ್ ಆಫ್ ಬರೋಡದ ಸಂಸ್ಥಾಪನಾ ದಿನವಾದ ಇಂದು ಸರ್ಕಾರಿ ಶಾಲಾ ಮಕ್ಕಳಿಗೆ ಅವಶ್ಯಕತೆ ಇರುವ ಶಾಲಾ ಬ್ಯಾಗ್, ಪುಸ್ತಕ, ಹಾಗೂ ಪೆನ್ನು ಗಳ ವಿತರಣೆ ಮಾಡಲಾಗಿದೆ ಎಂದರು.
ಮುಂದೆ ನಮ್ಮ ಬ್ಯಾಂಕ್ ವತಿಯಿಂದ ಮತ್ತಷ್ಟು ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು.
ಬ್ಯಾಂಕ್ ಸಿಬ್ಬಂದಿ ಮುನೇಗೌಡ ಮಾತನಾಡಿ ಹಲವು ಬಾರಿ ನಮ್ಮ ವಯಕ್ತಿಕ ವಿಶೇಷದಿನಗಳನ್ನು ಅನ್ನದಾಸೋಹ ಸಮಿತಿಯೋಟ್ಟಿಗೆ ಆಚರಿಸಿದ್ದೇವೆ. ಇಂದು ಸುದಿನ ನಮ್ಮ ಬ್ಯಾಂಕ್ ಸ್ಥಾಪನೆಯಾಗಿ 117 ವರ್ಷಗಳನ್ನು ಪೂರ್ಣಗೋಳಿಸಿರುವ ಹಿನ್ನಲೆಯಲ್ಲಿ ಶಾಲಾಮಕ್ಕಳಿಗೆ ಬ್ಯಾಗ್ ವಿತರಣೆ ಮಾಡಲಾಗಿದೆ ವಿಶೇಷ ದಿನವನ್ನು ವಿಶೇಷವಾಗಿ ಅನ್ನದಾಸೋಹಿ ಮಲ್ಲೇಶ್ ನೇತೃತ್ವದಲ್ಲಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಅನ್ನದಾಸೋಹ ಕಾರ್ಯಕ್ರಮಕ್ಕೆ ವಿಶೇಷ ದಾನಿಗಳಾಗಿ ದೊಡ್ಡಬಳ್ಳಾಪುರ ನಗರಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ರವರು ಸಹಾಯಹಸ್ತ ನೀಡಿದ್ದು ಅವರಿಗೆ ವಿಶೇಷವಾಗಿ ಅನ್ನದಾಸೋಹಿ ಮಲ್ಲೇಶ್ ಮತ್ತು ತಂಡ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು.
ಕಾರ್ಯಕ್ರಮದ ಆಯೋಜಕ ಅನ್ನದಾಸೋಹಿ ಮಲ್ಲೇಶ್ ಮಾತನಾಡಿ ಇಂದಿನ ಅನ್ನದಾಸೋಹ ಕಾರ್ಯಕ್ರಮಕ್ಕೆ ಗ್ರಾಮದ ಮುಖಂಡರಾದ ಡಿ ಕೆ ಭಾಸ್ಕರ್ ರಾವ್ ಸಹಾಯಹಸ್ತ ನೀಡಿದ್ದು. ಸ್ಥಳೀಯರಾದ ಶಿವಲೀಲಾ ಅವರು ತಮ್ಮ ಹುಟ್ಟು ಹಬ್ಬದ ಅಂಗವಾಗಿ ಮಕ್ಕಳಿಗೆ
ಸಿಹಿ ವಿತರಣೆ ಮಾಡಿದ್ದಾರೆ.ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರಾದ ವಿನೋದ್ ಕುಮಾರ್ ರವರು ಇಂದಿನ ಕಾರ್ಯಕ್ರಮದಲ್ಲಿ ವಿಶೇಷವಾಗಿ ಭಾಗವಹಿಸಿ ತಮ್ಮ ಬ್ಯಾಂಕ್ ಸ್ಥಾಪನೆಯಾದ ದಿನವನ್ನು ಅನ್ನದಾಸೋಹ ಸಮಿತಿಯ ಜೊತೆ ಶಾಲಾ ಮಕ್ಕಳ ವಿಧ್ಯಾರ್ಜನೆಗೆ ಅವಶ್ಯಕವಿರುವ ಸಾಮಗ್ರಿಗಳನ್ನು ಮಕ್ಕಳಿಗೆ ನೀಡುವ ಮೂಲಕ ಆಚರಣೆ ಮಾಡಿರುವುದು ಶ್ಲಾಘನಿಯ ಅವರ ಸಮಾಜ ಸೇವೆ ಮತ್ತಷ್ಟು ಮುಂದುವರೆಯಲಿ ಎಂದು ಹಾರೈಸಿದರು.ತಮ್ಮ ಯಾವುದೇ ವಿಶೇಷ ದಿನಗಳನ್ನು ಸಂಭ್ರಮಾಚರಣೆಯನ್ನು ಅನ್ನದಾಸೋಹ ಸಮಿತಿಯೊಂದಿಗೆ ಆಚರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಅನ್ನದಾಸೋಹ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.