
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03,2024 (ವಿಜಯಮಿತ್ರ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು:-ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಲ್, ಹಾಗೂ ಫಾರ್ಸಿ, ಜನಾಂಗಕ್ಕೆ ಸೇರಿದವರಾಗಿರಬೇಕು.), ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ 60% ಅಂಕವನ್ನು ಪಡೆದಿರಬೇಕು, ವಿದೇಶ ವಿಶ್ವವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿರಬೇಕು, ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ), ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣ ಪತ್ರ, 10ನೇ ತರಗತಿಯ ಅಂಕಪಟ್ಟಿ ಮತ್ತು 12ನೇ ತರಗತಿಯ ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ವರ್ಗಾವಣೆ ಪ್ರಮಾಣ ಪತ್ರ, ಪ್ರಸ್ತುತ ಅಧ್ಯಯನ ಪ್ರಮಾಣ ಪತ್ರ, ಕಾಲೇಜು ಶುಲ್ಕ ರಚನೆ, ಪಾಸ್ಪೋರ್ಟ್ ನಕಲು, ವೀಸಾ ನಕಲು, ಮಾರಾಟದ ಪತ್ರಗಳು ಮತ್ತು ತಾಯಿಯ ಪತ್ರ, ಖಾತಾ ಸಾರ ಮತ್ತು ಖಾತಾ ಪ್ರಮಾಣ ಪತ್ರ ಅಥವಾ ರೂಪಾಂತರ, ನಮೂನೆ ನಂ.15 ರಲ್ಲಿ ನಿಲ್ ಎನ್ಕಂಬರೆನ್ಸ್ ಪ್ರಮಾಣ ಪತ್ರ, ನವೀಕೃತ ತೆರಿಗೆ ಪಾವತಿಸಿದ ರಶೀದಿ, ಸೂಕ್ತ ಪ್ರಾಧಿಕಾರದಿಂದ ಮಾರ್ಗದರ್ಶನ ದರ, ಜಿಲ್ಲಾ ವ್ಯವಸ್ಥಾಪಕರಿಂದ ಆಸ್ತಿಯ ಸ್ಥಳ ಪರಶೀಲನೆ ವರದಿ, ನೋಂದಾಯಿತ ಮೌಲ್ಯಮಾಪಕರಿಂದ ಮೌಲ್ಯಮಾಪನ ವರದಿ, ಫಲಾನುಭವಿಯ ಪ್ರಮಾಣ ಪತ್ರ, ಫಲಾನುಭವಿ ಮತ್ತು ಜಾಮೀನುದಾರರ ಜಂಟಿ ಪ್ರಮಾಣ ಪತ್ರ, ಪ್ರಾಮಿಸರಿ ನೋಟ್ ಜೊತೆಗೆ ಡಿ ಪಿ ನೋಟ್ ಡೆಲಿವರಿ ಲೆಟರ್ ಈ ದಾಖಲೆಗಳು ಅರ್ಜಿ ಸಲ್ಲಿಸಲು ಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯ ಪ್ರತಿ ಹಾಗೂ ಆಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಬೇಕಾದ ಕಛೇರಿ ವಿಳಾಸ:- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ: 080-27681786/Gmail:kmdcbrural@gmail.com ಇಲ್ಲಿ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.