
ದೊಡ್ಡಬಳ್ಳಾಪುರ (ವಿಜಯಮಿತ್ರ) : ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಕಛೇರಿಯಲ್ಲಿ ಭಾರತರತ್ನ ಸರ್ವಪಲ್ಲಿ ಡಾ. ರಾಧಾಕೃಷ್ಣರವರ ಫೋಟೋ ಇಟ್ಟು ಪೂಜೆ ಸಲ್ಲಿಸುವ ಮುಖಾಂತರ ಶಿಕ್ಷಕರ ದಿನಾಚರಣೆಯನ್ನುಆಚರಣೆ ಮಾಡಲಾಯಿತು.
ಪೋಷಕರ ಮಕ್ಕಳಿಗೆ ವಿದ್ಯೆಯ ಜೊತೆಯಲ್ಲಿ ಸಂಸ್ಕಾರ ಕಲಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೂಯ್ಯಲುವ ಶಿಕ್ಷಕ ಮುಂದೆ ಸಮಾಜದ ದಾರಿ ದೀಪವಾಗಿ ಬೆಳಗಿಸುತ್ತಾರೆ ಮಕ್ಕಳು ತಪ್ಪು ಮಾಡಿದಾಗ ಗುರುಗಳು ಶಿಕ್ಷೆ ನೀಡಿದರು ತಪ್ಪು ಎಂದರೆ ಅವರಿಗೆ ಉತ್ತಮ ಮಾರ್ಗದರ್ಶನ ನೀಡುವುದು ಯಾರು ಎಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ನಂಜಪ್ಪ ತಿಸಿದರು.
ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ ಮಾತನಾಡಿ ಭಾರತರತ್ನ ಸರ್ವಪಲ್ಲಿ ರಾಧಾಕೃಷ್ಣ ರವರು ರಾಷ್ಟ್ರಪತಿಗಳಾಗಿ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿ ಉತ್ತಮ ಶಿಕ್ಷಕರಾಗಿ ದೇಶ ಹಾಗು ಸಮಾಜಕ್ಕೆ ಅಪಾರ ಕೊಡುಗೆ ನೀಡಿದವರು ಶ್ರೇಷ್ಠ ಶಿಕ್ಷಕರಾಗಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳಿ ವಿದ್ಯೆಯ ಜೊತೆಯಲ್ಲಿ ಒಳ್ಳೆಯ ಸಂಸ್ಕಾರ ನೀಡಿದ ನಂತರ ರಾಷ್ಟ್ರಪತಿಳಾಗಿ ಸೇವೆಯನ್ನು ಸಲ್ಲಿಸಿದ್ದಾರೆ.ಪ್ರತಿಯೋಬ್ಬರು ಗುರುವಿನ ಮಾರ್ಗದರ್ಶನ ಪಡೆಯುವ ಜೊತೆಗೆ ಅವರನ್ನು ಪ್ರೀತಿ ಗೌರವಿಸುವುದನ್ನು ಪಾಲಿಸಿದರೆ ಜೀವನ ಉಜ್ವಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಮಂಜುನಾಥ. ಪಣೀಶ್ ಅಜಯ್. ನವೀನ್ ಕುಮಾರ್. ಗಂಗರಾಜ್ ಶಶಿಕಲಾ ರೇಷ್ಮಾ ಬಾನು ರಾಗಿಣಿ ಕಾವ್ಯ ಪದ್ಮಾವತಿ ತಾಲ್ಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು.