ಕರ್ನಾಟಕ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ವತಿಯಿಂದ ಹಲವು ಗ್ಯಾರೆಂಟಿ ಯೋಜನೆಗಳ ಅನುಷ್ಠಾನವನ್ನು ನೀಡಿದ್ದು. ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಜನಮಣನೆ ಪಡೆದಿದೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮಹಿಳೆಯರು ಸಾಕಷ್ಟು ವಿಶೇಷ ಕಾರ್ಯಗಳನ್ನು ಆರಂಭಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಬಹುದಾಗಿದೆ ಅಂತೆಯೇ..
ರಾಯಬಾಗ್ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿದ್ದಾರೆ.
Ad
ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಗ್ರಂಥಾಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡಿತಿ’ ಎಂಬ ಪುಸ್ತಕವನ್ನು ನೀಡುವ ಮೂಲಕ ಶುಭ ಹಾರೈಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ??
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ರಾಯಬಾಗ್ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ನಿರ್ಮಿಸಿರುವ ಗ್ರಂಥಾಲಯ ಜ್ವಲಂತ ಉದಾಹರಣೆಯಾಗಿದೆ, ಅವರ ಈ ಕಾರ್ಯ ನಿಜಕ್ಕೂ ಕಾಣಬಹುದಾಗಿದೆ ಆವಿಸ್ಮರಣೀಯ.
ಮಲ್ಲವಕ್ಕ ಮೇಟಿ ಅವರ ನಿಸ್ವಾರ್ಥ ಸೇವೆಯ ಹಿನ್ನೆಲೆಯಲ್ಲಿ ಚಿಕ್ಕ ಉಡುಗೊರೆಯಾಗಿ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡಿತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಕಳುಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
