ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದರೆ ಅವರು ಸ್ವೀಕರಿಸಿದ ಬೌದ್ಧ ಧರ್ಮದಲ್ಲಿ ನೀಡಿರುವ ಪಂಚಶೀಲ ತತ್ವಗಳನ್ನು ಕೂಡ ಅಳವಡಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ಪ್ರಜ್ಞಾವಂತರು ಇಂದು ಸಾಮೂಹಿಕವಾಗಿ ಬೌದ್ಧ ಧರ್ಮ ಸ್ವೀಕರಿಸುತ್ತಿದ್ದಾರೆ ಎಂದು ನ್ಯಾನ ಲೋಕ ಭಂತೆ ತಿಳಿಸಿದರು

ನಗರದಲ್ಲಿ ಬೌದ್ಧ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ರವರ ಧಮ್ಮ ಧೀಕ್ಷರ 68ನೇ ವರ್ಷದ ಸ್ಮರಣೆಗಾಗಿ ತಾಲ್ಲೂಕು ಕಛೇರಿ ವೃತ್ತದಿಂದ ಹಳೆ ಬಸ್ ನಿಲ್ದಾಣದ ಬಾಬಾ ಸಾಹೇಬರ ಪ್ರತಿಮೆಯವರೆಗೆ ಕ್ಯಾಂಡಲ್ ಸಹಿತ ಧಮ್ಮ ಮೈತ್ರಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೇವಲ ಭಾರತ ರಸ್ತೆಯಲ್ಲಿದೆ 48 ದೇಶಗಳಲ್ಲಿ ಆರಾಧಿಸುತ್ತಿದ್ದಾರೆ ಇದಕ್ಕೆ ಮುಖ್ಯ ಕಾರಣ ಸಮಾನತೆಗಾಗಿ ಅವರು ಮಾಡಿದ ಹೋರಾಟ ಮತ್ತು ಅಂಬೇಡ್ಕರ ಬೌದ್ಧ ಧರ್ಮ ಸ್ವೀಕಾರ, ಬೌದ್ಧ ಧರ್ಮದಲ್ಲಿರುವ ಪಂಚಶೀಲ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಪಂಚಕ್ಕೆ ಮಾದರಿ ಜೀವನ ತೋರಿಸಿದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಹಾದಿಯಲ್ಲಿ ಇಂದಿನ ಯುವ ಪೀಳಿಗೆ ಸಾಗುತ್ತಿದೆ ಇದಕ್ಕೆ ಉತ್ತಮ ಉದಾಹರಣೆಯೆಂಬಂತೆ ಇಂದು ಹಲವಾರು ಯುವಕರು ಬೌದ್ಧ ಧರ್ಮ ಸ್ವೀಕಾರ ಮಾಡುತ್ತಿರುವುದು ಹಾಗೂ ಪಂಚಶೀಲ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸಾಗಿಸುತ್ತಿರುವುದೇ ಆಗಿದೆ ಎಂದರು

Ad
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವರು ಸಾಮೂಹಿಕವಾಗಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು.

ಅನಂತ್ ಕುಮಾರ್ ಮಾತನಾಡಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಆದರ್ಶ ಮಾರ್ಗದಲ್ಲಿ ಜೀವನ ಸಾಗಿಸುತ್ತಿದ್ದು,ಅವರ ಧಮ್ಮ ಧೀಕ್ಷೆಯ 68ನೇ ವರ್ಷದ ಈ ಸುದಿನದಂದು ನಾನು ಸಹ ಧಮ್ಮ ಧೀಕ್ಷೆ ಪಡೆಯುವ ಮೂಲಕ ಪಂಚಾಶೀಲ ತತ್ವವನ್ನು ಸ್ವೀಕರಿಸಿ,ಪಾಲಿಸುವ ಮೂಲಕ ಜೀವನ ಸಾಗಿಸಲು ನಿರ್ಣಯಿಸಿದ್ದೇನೆ ಭಗವಾನ್ ಬುದ್ದರು ನೀಡಿರುವ ಉನ್ನತ ಮೌಲ್ಯಗಳನ್ನು ಅನುಸರಿಸುವ ಮೂಲಕ ಸಮಾಜದಲ್ಲಿ ಉತ್ತಮ ಜೀವನ ನೆಡೆಸಲು ನಿರ್ಧಾರಿಸಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ರಾಜು ಸಣ್ಣಕ್ಕಿ, ಗುಳ್ಯ ಹನುಮಣ್ಣ, ರಾಜಗೋಪಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
