2024-2025 ನೇ ಸಾಲಿನ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯನ್ನು ತಾಲ್ಲೂಕಿನ ದೇವರಾಜು ಅರಸು ಕಾಲೇಜಿನಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿತ್ತು ಸ್ಪರ್ಧೆಯಲ್ಲಿ ವಿವಿಧ 29 ಜಿಲ್ಲೆಗಳ ಯೋಗಪಟುಗಳು ಭಾಗವಹಿಸಿದ್ದರು.

ಸದರಿ ಕಾರ್ಯಕ್ರಮದ ಅಂತಿಮ ಘಟ್ಟದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ ಯೋಗ ಮಾಡುವುದರಿಂದ ಮನುಷ್ಯನ ಹಲವು ಕಾಯಿಲೆಗಳು ದೂರವಾಗಿ ಒಳ್ಳೆಯ ಆರೋಗ್ಯ ಹಾಗೂ ದಿನನಿತ್ಯದ ಜೀವನದಲ್ಲಿ ಮನುಷ್ಯ ತುಂಬ ಚಟುವಟಿಕೆಯಿಂದ ಇರಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿನಿತ್ಯ ಯೋಗ ಮಾಡುವುದನ್ನು ರೂಡಿಸಿಕೊಳ್ಳಬೇಕು ಎಂದರು.

29 ಜಿಲ್ಲೆಗಳಿಂದ ಆಗಮಿಸಿದ್ದ ಯೋಗ ಪಟುಗಳನ್ನು ಕುರಿತು ನಾವು ಓದುವ ದಿನಗಳಲ್ಲಿ ಇಷ್ಟೋಂದು ಅನುಕೂಲಗಳು ಇರಲಿಲ್ಲ ಅಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಊಟದ ವ್ಯವಸ್ಥೆ.ಬಟ್ಟೆ.ಇತರೆ ಯಾವುದು ಸರಿಯಾಗಿ ಸಿಗುತ್ತಿರಲಿಲ್ಲ ಎಂದು ನೆನೆಯುತ್ತಾ ಇನ್ನು ಮುಂದಿನ ದಿನಗಳಲ್ಲಿ ಹೆಚ್ಚು ರಾಜ್ಯ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಗಳಲ್ಲಿ ಯೋಗಪಟುಗಳು ಭಾಗವಹಿಸುವುದರ ಮೂಲಕ ಯೋಗ ಅಭ್ಯಾಸ ಕಲಿಸಿದ ಗುರುಗಳಿಗೆ ಹಾಗೂ ಪೋಷಕರಿಗೆ ಕೀರ್ತಿ ತರುವ ಕೆಲಸ ಆಗಲಿ ಹಾರೈಸಿದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕ ಎನ್.ಮೋಹನ್ ಕುಮಾರ್, ದೇವರಾಜು ಅರಸು ಸಂಸ್ಥೆಯ ರಾಕೇಶ್,ಯೋಗ ಅಮರನಾಥ್,ಯೋಗ ನಟರಾಜ್,ಪ್ರವೀಣ್ ಶಾಂತಿನಗರ, ಬಾಬಣ್ಣ, ಸಂಜೀವ್,ಕೋದಂಡರಾಮ,ಅಂತರಾಷ್ಟ್ರೀಯ ಯೋಗ ಪಟು ವರುಣ್ ಸೇರಿದಂತೆ .ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು….
