
ದೊಡ್ಡಬಳ್ಳಾಪುರ : ನಗರ ತಾಲ್ಲೂಕು ಕುರುಬ ಸಂಘದ ಹಾಗು ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ದೊಂದಿಗೆ ನ.18 ರಂದು ದಾಸ ಶ್ರೇಷ್ಠ ಕನಕದಾಸ ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಸಲುವಾಗಿ ತಾಲ್ಲೂಕಿನ ಎಲ್ಲಾ ಮುಖಂಡರನ್ನು ಪೂರ್ವಬಾವಿ ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ಕೊಂಗಾಡಿಯಪ್ಪ ರಸ್ತೆಯಲ್ಲಿನ ಕನಕ ಭವನದಲ್ಲಿ ಕರೆಯಲಾಗಿತ್ತು ಸಭೆಯಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಖಜಾಂಚಿ ಕೆ ಎಂ ಕೃಷ್ಣಮೂರ್ತಿ ಮಾತನಾಡಿ ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿವಾಗಿಲ್ಲ, ಅವರಿಗೆ ಸಂಬಂಧಿಸಿದ ವಿಶೇಷ ದಿನವನ್ನು ಅತ್ಯಂತ ಗೌರವ ಹಾಗೂ ನಿಷ್ಠೆಯಿಂದ ಆಚರಣೆ ಮಾಡಬೇಕಾಗಿದೆ.
ನಮ್ಮ ಸಮುದಾಯದ ಎಲ್ಲಾ ಮುಖಂಡರನ್ನು ಒಗ್ಗೂಡುವ ಮೂಲಕ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಬೇಕಿದೆ ನಮ್ಮ ಸಮುದಾಯ ಬಲಿಷ್ಠ ಸಮುದಾಯವಾಗಿ ಹೊರ ಹೊಮ್ಮುಲು ಎಲ್ಲರೂ ಶ್ರಮಿಸಬೇಕಾಗಿದೆ ಅದರಿಂದ ತಾಲ್ಲೂಕಿನ ಎಲ್ಲಾ ಗ್ರಾಮ, ನಗರ,ಪಟ್ಟಣ ಪ್ರದೇಶಗಳನ್ನು ಒಳಗೊಂಡಂತೆ ತಾಲ್ಲೂಕಿನ ಕಟ್ಟ ಕಡೆಯ ಗ್ರಾಮಗಳನ್ನು ಗಣನೆಗೆ ತೆಗೆದುಕೊಂಡು ಕಾರ್ಯಕ್ರಮದ ಯೋಜನೆ ರೂಪಿಸಬೇಕಿದೆ ಎಂದರು.
ತಮ್ಮ ತಮ್ಮ ಗ್ರಾಮಗಳಲ್ಲಿ ಯುವಕರು ಕನಕದಾಸರ ಹೆಸರಿನಲ್ಲಿ ವಿವಿಧ ಸಂಘಗಳನ್ನು ಕಟ್ಟಿಕೊಂಡು ಹಲವು ರೀತಿಯಲ್ಲಿ ಕನಕ ಜಯಂತಿಯನ್ನು ಆಚರಣೆ ಮಾಡುತ್ತಿದ್ದಾರೆ, ಅಂತಹ ಉತ್ಸಾಹಿ ಯುವಕರನ್ನು ಕಾರ್ಯಕ್ರಮಕ್ಕೆ ಕರೆತರುವ ಕಾರ್ಯ ನೆಡೆಯಬೇಕಿದೆ,ತಾಲ್ಲೂಕಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜನೆ ಮಾಡಲಾಗುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ತಮ್ಮ ಗ್ರಾಮಗಳಲ್ಲಿ ಕಾರ್ಯಕ್ರಮ ರೂಪಿಸುವಂತೆ ತಿಳಿ ಹೇಳಬೇಕಿದೆ, ತಾಲೂಕು ಆಡಳಿತ ವತಿಯಿಂದ ನಡೆಸುವ ಕಾರ್ಯಕ್ರಮಕ್ಕೆ ನಮ್ಮ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಯಾಗಿವಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.
ತಾಲ್ಲೂಕು ವಕೀಲರ ಸಂಘದ ಪ್ರದಾನ ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾತನಾಡಿ ತಾಲ್ಲೂಕಿನ ತೂಬಗೆರೆ ಹೋಬಳಿ ಸಾಸಲು ಹೋಬಳಿ ಮಧುರೆ ಹೋಬಳಿ ದೊಡ್ಡಬೆಳವಂಗಲ ಹೋಬಳಿ ಕಸಬಾ ನಗರದ ಎಲ್ಲಾ ಯುವ ಸಮುದಾಯವನ್ನು ಒಗ್ಗೂಡಿಸಿ ಎಲ್ಲಾರು ಒಂದು ಕಡೆ ಕನಕ ಜಯಂತಿಯನ್ನು ಆಚರಣೆ ಮಾಡುವಂತೆ ಸಲಹೆ ನೀಡಿದರು.
ಪೂರ್ವಬಾವಿ ಸಭೆಯಲ್ಲಿ ತಾಲ್ಲೂಕು ಕುರುಬ ಸಂಘದ ನಿಕಟ ಪೂರ್ವ ಅಧ್ಯಕ್ಷ ಬಂಡೆ ನರಸಿಂಹಮೂರ್ತಿ,ಗೌರವಾಧ್ಯಕ್ಷ ತಿಮ್ಮೇಗೌಡ,ನಗರಸಭೆಯ ಉಪಾಧ್ಯಕ್ಷ ರೈಲ್ವೇ ಸ್ಟೇಷನ್ ಮಲ್ಲೇಶ್, ಸಮಾಜ ಸೇವಕ ಹೊಸಹುಡ್ಯ ಮಲ್ಲೇಶ,ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಹಕಾರ ಸಂಘದ ಅಧ್ಯಕ್ಷ ಮಾರಣ್ಣ, ಎಂ ಸಿ ಮಂಜುನಾಥ,ನಗರಸಭಾ ಸದಸ್ಯ ಚಂದ್ರ ಮೋಹನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.