
ದೊಡ್ಡಬಳ್ಳಾಪುರ : ಸುಮಾರು 250ಕ್ಕೂ ಅಧಿಕ ಜನರನ್ನು ವಂಚಿಸಿ ಚೀಟಿ ಹಣ ನೀಡದೆ ಮಹಿಳೆಯೊಬ್ಬರು ಪರಾರಿಯಾಗಿರುವ ಘಟನೆ ತಾಲೂಕಿನ ಮೂಕಾಂಬಿಕಾ ಬಡಾವಣೆಯಲ್ಲಿ ನಡೆದಿದೆ.
ಹೌದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಪುಷ್ಪಕಲಾ ಎಂಬ ಮಹಿಳೆಯು ಯಾವುದೇ ಕಾನೂನು ಅನುಮತಿ ಇಲ್ಲದೆ ಅಕ್ರಮವಾಗಿ ಚೀಟಿ ದಂಧೆ ನೆಡೆಸುತ್ತಿದ್ದು , ಆಕೆಯ ಮೇಲೆ ನಂಬಿಕೆ ಇಟ್ಟು ಚೀಟಿ ಹಾಕಿದ್ದ 250ಕ್ಕೂ ಹೆಚ್ಚು ಚೀಟಿದಾರರಿಗೆ ಹಣ ನೀಡದೆ ವಂಚಿಸಿ ಪರಾರಿಯಾಗಿದ್ದಾರೆ , ಹಣ ಕಳೆದುಕೊಂಡ ಬಡ ಮಹಿಳೆಯರು ಹಿಡಿ ಶಾಪ ಹಾಕಿದ್ದಾರೆ.
ದೊಡ್ಡಬಳ್ಳಾಪುರ ನಗರದ ಮುಕ್ತಾಂಭಿಕ ಬಡಾವಣೆಯ ನಿವಾಸಿ ಈ ಪುಷ್ಪಕಲಾ, ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈಕೆ ಕಳೆದ ನಾಲ್ದೈದು ವರ್ಷಗಳಿಂದ ಚೀಟಿ ವ್ಯವಹಾರವನ್ನು ನಡೆಸುತ್ತಿದ್ದರು, ಕಳೆದ ನಾಲ್ಕು ವರ್ಷದಿಂದ ಕಟ್ಟುನಿಟ್ಟಾಗಿ ಚೀಟಿ ವ್ಯವಹಾರ ನಡೆಸುವ ಮೂಲಕ ಸುತ್ತಮುತ್ತಲಿನ ಜನರ ನಂಬಿಕೆ ಗಳಿಸಿದ್ದ ಪುಷ್ಪಾಕಲಾ ಬಳಿ ಸುತ್ತಮುತ್ತಲಿನ ಸುಮಾರು 250ಕ್ಕೂ ಹೆಚ್ಚು ಜನರು ತಮ್ಮ ಮಗಳ ಮದುವೆಗಾಗಿ, ಮನೆ ಕಟ್ಟಲು, ಬ್ಯುಸಿನೆಸ್ ಮಾಡುವ ಸಲುವಾಗಿ ಚೀಟಿ ಹಾಕಿದ್ದರು.
ಆಕ್ಟೋಬರ್ 27ರಂದು ಗಂಡ ರುದ್ರಆರಾಧ್ಯ ಜಮೀನು ಕೆಲಸಕ್ಕೆಂದು ಊರಿಗೆ ಹೋಗಿದ್ದಾರೆ, ಮಕ್ಕಳು ಕಾಲೇಜಿಗೆ ಹೋಗಿದ್ದ ವೇಳೆ ಪುಷ್ಪಕಲಾ ಮನೆಯಿಂದ ನಾಪತ್ತೆಯಾಗಿದ್ದಾರೆ, ಮನೆಯಿಂದ ನಾಪತ್ತೆಯಾದ ಪುಷ್ಪಕಲಾ ಗಂಡನಿಗೆ ವಾಟ್ಸಾಪ್ ನಲ್ಲಿ ಆಡಿಯೋ ಮೆಸೇಜ್ ಕಳಿಸಿದ್ದು, ತನ್ನಗೆ ಯಾರೋ ಮೋಸ ಮಾಡಿದ್ದು, ವಿಷ ಕುಡಿದು ಸಾಯುವುದ್ದಾಗಿ ಹೇಳಿದ್ದಾಳೆ, ಗಂಡ ರುದ್ರಆರಾಧ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಂಡತಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ.
ಪುಷ್ಪಕಲಾ ನಾಪತ್ತೆ ಪ್ರಕರಣ ಚೀಟಿದಾರರ ಆತಂಕಕ್ಕೆ ಕಾರಣವಾಗಿದೆ, ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಸೇರಿದ ಚೀಟಿದಾರರು ಪುಷ್ಪಕಲಾ ಮಾಡಿರುವ ವಂಚನೆಯನ್ನು ಬಯಲು ಮಾಡಿದ್ದಾರೆ, ಇದೇ ವೇಳೆ ಕನ್ನಡಪರ ಹೋರಾಟಗಾರ ರಾಮಕೃಷ್ಣ ಮಾಧ್ಯಮಗಳೊಂದಿಗೆ ಮಾತನಾಡಿ ಬಡ ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್ ಮಹಿಳೆಯರು, ಗಾರೆ ಕೆಲಸಗಾರರು ತಮ್ಮ ದುಡಿಮೆ ಹಣದೊಂದಿಗೆ ಪುಷ್ಪಕಲಾ ಪರಾರಿಯಾಗಿದ್ದಾರೆ, ಪೊಲೀಸ್ ಠಾಣೆಗೆ ದೂರು ನೀಡಿ ಕಾನೂನು ಕ್ರಮದ ಮೂಲಕ ಬಡವರಿಗೆ ಹಣ ಕೊಡಿಸುವ ಕೆಲಸ ಮಾಡುವುದ್ದಾಗಿ ತಿಳಿಸಿದರು.
ನಿವೃತ್ತ ಶಿಕ್ಷಕರಾದ ಗಜೇಂದ್ರ ಮಾತನಾಡಿ, ಕಳೆದ ನಾಲ್ಕು ವರ್ಷದಿಂದ ಪುಷ್ಪಕಲಾ ಶಿಸ್ತಿನಿಂದ ಚೀಟಿ ವ್ಯವಹಾರ ನೆಡೆಸುತ್ತಿದ್ದರು, ಇದೇ ನಂಬಿಕೆ ಮೇಲೆ ನಾನು ಸಹ ನಾಲ್ಕೈದು ಚೀಟಿಗಳ ಹಾಕಿದ್ದೇ, ಚೀಟಿ ಕಂತು ಕಟ್ಟಲು ಪ್ರತಿ ತಿಂಗಳು 1 ಲಕ್ಷಕ್ಕೂ ಹೆಚ್ಚು ಹಣವನ್ನ ಪೋನ್ ಪೇ, ಅಕೌಂಟ್ ಮೂಲಕ ಪಾವತಿ ಮಾಡಿದ್ದೇನೆ, ಆಕೆಯ ವಂಚನೆಯಿಂದ ಸುಮಾರು 35 ಲಕ್ಷ ಹಣವನ್ನ ಕಳೆದುಕೊಂಡಿದ್ದೇನೆ. ಇನ್ನೂ ದೊಡ್ಡಬಳ್ಳಾಪುರದಲ್ಲಿ ಅಕ್ರಮ ಚೀಟಿ ದಂಧೆ ನಡೆಯುತ್ತಿದ್ದು ಇವುಗಳಿಗೆ ಕಡಿವಾಣ ಹಾಕಿದ್ದಾಗ ಮಾತ್ರ ಇಂತಹ ವಂಚನೆಯ ಪ್ರಕರಣಗಳನ್ನು ತಡೆಯಲು ಸಾಧ್ಯ ಎಂದರು.