ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ PEHS ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸೋಮವಾರ ಭಾರತ ಸರ್ಕಾರ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಡಾ. ಪಿ ಪಿ. ವಾವಾ ಅವರು ಭೇಟಿನೀಡಿ ಕರ್ಮಚಾರಿಗಳ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಆಯೋಗದ ಜಿಲ್ಲಾ ಸದಸ್ಯರಾದ ಆರ್ ವಿ ಮನು ಮಾತನಾಡಿ ಸಫಾಯಿ ಕರ್ಮಚಾರಿಗಳ ಸಮಸ್ಯೆ ಕುರಿತು ಅಹವಾಲು ಸ್ವೀಕರಿಸಿ ಅವರ ಕುಂದುಕೊರತೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕಾರ್ಯವನ್ನು ಆಯೋಗದ ಸದಸ್ಯರಾದ ಮಾನ್ಯ ಡಾ. ಪಿ ಪಿ ವಾವಾ ಸರ್ ಅವರ ಕಾರ್ಯಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಸಫಾಯಿ ಕರ್ಮಚಾರಿಗಳನ್ನು ಕುರಿತು ಅವರಿಗಿರುವ ಕಾಳಜಿ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಸಿಇಒ ಸೇರಿದಂತೆ ಸಲಹಾ ಸಮಿತಿಯ ಸದಸ್ಯರಾದ ಮುನಿಯಪ್ಪ, ಮ್ಯಾತ್ಯು,ಮುನಿರಾಜಪ್ಪ ಹಾಜರಿದ್ದರು.
