
ಬೆಂಗಳೂರು ಗ್ರಾಮಾಂತರ ಜಿಲ್ಲೆ : ಅರ್ಕಾವತಿ ನದಿ ಹೋರಾಟ ಸಮಿತಿಯು ಶುದ್ಧ ನೀರಿಗಾಗಿ ನಿರಂತರ ಹೋರಾಟ ನೆಡೆಸುತ್ತಿದ್ದೂ ಯಾವುದೇ ಪ್ರಯೋಜನವಾಗಿಲ್ಲ ಹಾಗಾಗಿ ಗ್ರಾಮದ ಮಹಿಳಾ ಶಕ್ತಿ ಹೋರಾಟದಲ್ಲಿ ಕೈಜೋಡಿಸುವ ಮೂಲಕ ಪ್ರತಿಭಟನೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಗ್ರಾಮ ಪಂಚಾಯತಿ ಸದಸ್ಯೆ ಚೈತ್ರ ಭಾಸ್ಕರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿ ಗ್ರಾಮಸ್ಥರು ನಿರಂತರ ಹೋರಾಟ ಮಾಡುತ್ತಿದ್ದರು ಕ್ಯಾರೇ ಎನ್ನದ ಅಧಿಕಾರಿಗಳ ವಿರುದ್ಧ ಮಹಿಳಾ ಶಕ್ತಿ ಹೋರಾಟ ನೆಡೆಸಲು ಮುಂದಾಗಲಿದೆ.ತಾಲ್ಲೂಕಿನ ಭಾಷೆಟ್ಟಿ ಹಳ್ಳಿಯಲ್ಲಿ ಕಾರ್ಖಾನೆಗಳಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ತ್ಯಾಜ್ಯನೀರು ಜಲ ಮೂಲ ಸೇರುವ ಮೂಲಕ ಜಲಸಂಪನ್ಮೂಲಗಳು ಸಂಪೂರ್ಣಹಾಳಾಗಿವೆ ಈ ಕೂಡಲೇ ಎಸ್ ಟಿ ಪಿ ಘಟಕ ಸ್ಥಾಪಿಸಲೇ ಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಗ್ರ ಹೋರಾಟ ನೆಡೆಸಲಾಗುವುದು ಎಂದರು.
ಸ್ಥಳೀಯರಾದ ಸುಮಿತ್ರಾ ಮಾತನಾಡಿ ಮನೆಯಲ್ಲಿ ಬಳಸುವ ನೀರು ಸಂಪೂರ್ಣ ರಾಸಾಯನಿಕ ಅಂಶಗಳಿಂದ ಕೂಡಿದ್ದು, ಗ್ರಾಮಸ್ಥರು ಹಲವು ಬಗೆಯ ಕಾಯಿಲೆಗಳಿಂದ ಬಳಲುತ್ತಿದ್ದು,ಈ ಸಮಸ್ಯೆ ಕುರಿತು ಅಧಿಕಾರಿಗಳ ಮೌನ ಸಲ್ಲದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಳೀಯವಾಗಿ ಕಲ್ಪಿಸಬೇಕು ಹಾಗೂ ಎಸ್ ಟಿ ಪಿ ಘಟಕ ಸ್ಥಾಪಿಸಬೇಕು, ಇಲ್ಲವಾದಲ್ಲಿ ನಮ್ಮ ಹೋರಾಟ ಮತ್ತಷ್ಟು ಹೆಚ್ಚಾಗಲಿದೆ ನಮ್ಮ ದನ ಕರುಗಳೊಂದಿಗೆ ಮಕ್ಕಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನೆಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸತೀಶ್, ವಸಂತ್ ಕುಮಾರ್, ಸುಮಿತ್ರಾ ರೂಪ ಸುಜಾತಾ ಅನಿತಾ, ಸುನಿತಾ, ಅನಿತಾ, ಚೈತ್ರ ಭಾಸ್ಕರ್, ಅಶ್ವತಮ್ಮ ನಗರತ್ನಮ್ಮ, ಸುಶೀಲಮ್ಮ, ವಿಜಯ್ ಕುಮಾರ್, ನಾರಾಯಣ ಮೂರ್ತಿ, ದೇವರಾಜ್, ಹರೀಶ್, ರಮೇಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು