
ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊನಘಟ್ಟ ಗ್ರಾಮಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇಂದು ನೆಡೆದಿದ್ದು ಅಧ್ಯಕ್ಷರಾಗಿ ಕಾಂಗ್ರೇಸ್ ಪಕ್ಷದ ಬೆಂಬಲಿತ ಸದಸ್ಯರಾದ ಕೊನಘಟ್ಟ ಜ್ಯೋತಿ ರಮೇಶ್ ಉಪಾಧ್ಯಕ್ಷರಾಗಿ ಹಮಾಮ್ ಗ್ರಾಮದ ಕಾಂಗ್ರೆಸ್ ಪಕ್ಷದ ಬೆಂಬಲಿತ ಸುಮಂಗಳ ವೆಂಕಟೇಶ್ ಅವಿರೋಧ ಆಯ್ಕೆಯಾಗಿದ್ದಾರೆ.
ಕೊನಘಟ್ಟ ಗ್ರಾಮಕ್ಕೆ ಸದಸ್ಯರೊಬ್ಬರಿಗೆ 25 ವರ್ಷಗಳ ನಂತರ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ ದೊರಕಿದ ಕಾರಣ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಮ್ಮ ಆಯ್ಕೆ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾ ಕಾಂಗ್ರೆಸ್ ಪಕ್ಷದ ವರಿಷ್ಟರಿಗೆ ಹಾಗೂ ತಮ್ಮ ಗೆಲುವಿಗೆ ಕಾರಣಕರ್ತರಾದ ಗ್ರಾಮಪಂಚಾಯಿತಿಯ ಎಲ್ಲಾ ಸದಸ್ಯರಿಗೂ ಹಾಗೂ ನಾಗರೀಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಸರ್ವ ಸದಸ್ಯರ ಸಲಹೆ ಹಾಗೂ ಸೂಚನೆ ಪಡೆದು ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ರೂಪಿಸುವ ಮೂಲಕ ಕೋನಘಟ್ಟ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.
ಸಂದರ್ಭದಲ್ಲಿ ಗ್ರಾಮಪಂಚಾಯತಿ ಸದಸ್ಯರಾದ ಮಂಜುನಾಥ್. ಬಾಲರಾಜ್, ಆರಾಧ್ಯ ಮತ್ತು ನಾಗೇಶ್ ಟಿ ರಾಮಾಂಜಿನಪ್ಪ, ಗೋವಿಂದಸಾಮಿ, ನಂಜಮರಿಯಪ್ಪ, ಲಿಂಗನಹಳ್ಳಿ ಎಂ ಪಿ ಸಿ ಎಸ್ ಅಧ್ಯಕ್ಷ K.M ಮಂಜುನಾಥ್ ರಾಜ್ಯದ ವಹ್ನಿಕುಲ ಕ್ಷತ್ರಿಯ ಸಂಘದ ನಿರ್ದೇಶಕರು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.