
ದೊಡ್ಡಬಳ್ಳಾಪುರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಯೋಜನೆ ಅಡಿಯಲ್ಲಿ 1,15,000 ರೂ ಮೌಲ್ಯದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಆರೋಡಿ ವಲಯದ ಮಾಚೇನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಯಿತು.
ತಾಲ್ಲೂಕಿನ ಆರೋಡಿ ವ್ಯಾಪ್ತಿಯ ಮಾಚೇನಹಳ್ಳಿ ಗ್ರಾಮ ನಿವಾಸಿ ಕಾಮಕ್ಕ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಈ ಹಿಂದೆ ಪ್ರತಿ ತಿಂಗಳ ಮಾಸಾಶನ ( ಪಿಂಚಣಿ) ಬರುವಂತ ವ್ಯವಸ್ಥೆ ಮಾಡಲಾಗಿದ್ದು.ಪ್ರಸ್ತುತ ಅವರಿಗೆ ವಾಸಿಸಲು ಮನೆ ಇಲ್ಲದ ಕಾರಣ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಮನೆ ಕಟ್ಟಿಕೊಡಲು 1,15,000 ರೂ ಮೊತ್ತದ ಅನುದಾನ ಮಂಜೂರಾಗಿದ್ದು, ಮನೆಯ ನಿರ್ಮಾಣಕ್ಕೆ ಇಂದು (ಡಿ.21)ಗುದ್ದಲಿ ಪೂಜೆಯ ಕಾರ್ಯಕ್ರಮವನ್ನು ಯೋಜನಾಧಿಕಾರಿಯವರಾದ ಸುಧಾ ಭಾಸ್ಕರ್ ನೆರವೇರಿಸುವ ಮೂಲಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದರು.
Ad
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರಕಾಶ್ , ರಂಗಣ್ಣ, ವಲಯದ ಮೇಲ್ವಿಚಾರಕರಾದ ಸುಪ್ರೀತ್ , ತಾಲ್ಲೂಕು ಸಮನ್ವಯ ಅಧಿಕಾರಿ ಛಾಯ, ಹಾಗೂ ಸೇವಾಪ್ರತಿನಿಧಿಗಳಾದ ಪುಟ್ಟತಾಯಮ್ಮ, ಆನಂದ್ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.