ದೊಡ್ಡಬಳ್ಳಾಪುರ : ತಾಲೂಕಿನಲ್ಲಿ ಸಾರ್ವಜನಿಕರು ತಮ್ಮ ಗ್ರಾಮಗಳ/ ವಾರ್ಡ್ ಗಳ ಸಮಸ್ಯೆ ಕುರಿತಂತೆ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳಿಗೆ ದೂರು ನೀಡುವ ಸಲುವಾಗಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಶಾಸಕ ಧೀರಜ್ ಮುನಿರಾಜು ನೂತನ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ .

ಹೌದು www.nammadoddaballapura. com / www.doddaballapura.com ಎಂಬ ವೆಬ್ ಸೈಟ್ ಗಳ ಮೂಲಕ ತಾಲೂಕಿನ ಹಲವು ಸಮಸ್ಯೆಗಳನ್ನು ಬಗೆಹರಿಸಲು ಶಾಸಕ ಧೀರಜ್ ಮುನಿರಾಜು ನಿರ್ಧರಿಸಿದ್ದು, ಈ ವೆಬ್ ಸೈಟ್ ಗಳಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳ ಮಾಹಿತಿ ದೊರೆಯಲಿದೆ .

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರದಲ್ಲಿ ಶಾಸಕ ಧೀರಾಜ್ ಗಮುನಿರಾಜು ಮಾತನಾಡುತ್ತಾ ತಾಲೂಕಿನ ಗ್ರಾಮ/ವಾರ್ಡ್ ಗಳಲ್ಲಿ ಹಲವು ಸಮಸ್ಯೆಗಳಿದ್ದು , ಸಮಸ್ಯೆಗಳನ್ನು ಕುರಿತು ದೂರು ಸಲ್ಲಿಸಲು ಅಥವಾ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅಧಿಕಾರಿಗಳ ಮಾಹಿತಿ ಕೊರತೆ ಇದೆ, ಈ ಕೊರತೆಯನ್ನು ನೀಗಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ವಿನೂತನವಾಗಿ ಸ್ಪಂದಿಸುವ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದು, ತಾಲ್ಲೂಕಿನ ಪ್ರತಿ ಗ್ರಾಮ ಹಾಗೂ ನಗರ ಮಟ್ಟದ ಅಧಿಕಾರಿಗಳ ಮಾಹಿತಿ www.doddaballapura.com/ WWW.NAMMADODDABALLAPURA.COM ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಈ ವೆಬ್ ಸೈಟ್ ಗಳಲ್ಲಿ ಪ್ರತಿ ಇಲಾಖೆಯ ಅಧಿಕಾರಿಗಳ ಮಾಹಿತಿ ಪಡೆಯುವುದಷ್ಟೇ ಅಲ್ಲದೇ ನಿಮ್ಮ ಸಮಸ್ಯೆ ಕುರಿತ ದೂರುಗಳನ್ನು ನೇರವಾಗಿ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಜೊತೆಗೆ ವಾಟ್ಸ್ ಆಪ್ ಮೂಲಕ ಅವರನ್ನು ಸಂಪರ್ಕಿಸುವ ಸೌಲಭ್ಯವು ಕೂಡ ಇದೆ, ಹಾಗಾಗಿ ಸಾರ್ವಜನಿಕರು ಮನೆಯಲ್ಲೇ ಕುಳಿತು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ಸುಲಭ ಮಾರ್ಗದಲ್ಲಿ ತರಬಹುದಾಗಿದೆ ಎಂದರು .

ತಾಲೂಕಿನ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
