
ದೊಡ್ಡಬಳ್ಳಾಪುರ : ಕೆಪಿಡಿ ಸಭೆಗೆ ಬಾರದೆ ಕೈಕೊಟ್ಟ ಅಧಿಕಾರಿಗಳು, ಹಲವು ಇಲಾಖೆಗಳ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ, ಸಭೆಯಲ್ಲಿ ಅಧಿಕಾರಿಗಳ ಕುರ್ಚಿ, ಖಾಲಿ ಖಾಲಿ ಗ್ರಾಮದ ಕೆಪಿಡಿ ಸಭೆ ಎಂದರೆ ಇಲಾಖೆಯ ಅಧಿಕಾರಿಗಳಿಗೆ ಗೌರವ ಇಲ್ಲವೇ ಎಂದು ಪ್ರಶ್ನಿಸುತ್ತಿರುವ ಗ್ರಾಮ ಪಂಚಾಯತಿ ಸದಸ್ಯರು
ಹೌದು ತಾಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 25 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಪಿಡಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ಅಧಿಕಾರಿಗಳೇ ಕಾಣುತ್ತಿಲ್ಲ, ಸುಮಾರು 25ಕ್ಕೂ ಅಧಿಕ ಇಲಾಖೆಗಳಿಗೆ ಈಗಾಗಲೇ ಕೆಪಿಡಿ ಸಭೆ ಕುರಿತು ಮಾಹಿತಿ ರವಾನಿಸಿದ್ದು , ಇಂದು ನಡೆಯುತ್ತಿರುವ ಸಭೆಯಲ್ಲಿ ಅಧಿಕಾರಿಗಳೇ ಗೈರಾಗಿರುವುದು ವಿಪರ್ಯಾಸ, ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಬಗೆಹರಿಸಬೇಕಾದ ಅಧಿಕಾರಿಗಳೇ ಸಭೆಯಲ್ಲಿ ಇಲ್ಲದಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಸಭೆ ಈಗಾಗಲೇ ಪ್ರಾರಂಭವಾಗಿದ್ದು, ಸಭೆಯಲ್ಲಿ ಕೇವಲ ಆರೋಗ್ಯ ಇಲಾಖೆ ಕೃಷಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಮಾತ್ರ ಹಾಜರಿದ್ದು, ಉಳಿದೆಲ್ಲ ಇಲಾಖೆಯ ಅಧಿಕಾರಿಗಳು ಗೈರಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ