ದೊಡ್ಡಬಳ್ಳಾಪುರ : ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಲು ಅವಿರತ ಹೋರಾಟ ನೆಡೆಸಿದ ಅಪ್ಪಯ್ಯಣ್ಣ ನವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ, ಸಹಕಾರ ಹಾಗೂ ಪಂಚಾಯತಿ ರಾಜಕೀಯಕ್ಕೆ ಅವರ ಪ್ರಾಮಾಣಿಕ ಸೇವೆ ಸ್ಮರಣಿಯ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು
ಶನಿವಾರದಂದು ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ಆಯೋಜಿಸಿದ ನುಡಿ ನಮನ ವೇದಿಕೆಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಅಪ್ಪಯ್ಯಣ್ಣ ಅವರ ಸಾವಿನ ವಿಷಯ ತಿಳಿದಾಗ ನಂಬಲು ಸಾಧ್ಯ ವಾಗಲಿಲ್ಲ,ಈ ಕುರಿತು ತಪ್ಪು ಮಾಹಿತಿ ಇರಬೇಕು ನೋಡಿ ಎಂದು ಹೇಳ್ಳಿದ್ದೇ ಕಾರಣ ಅವರ ಜೀವನ ಶೈಲಿ, ಅವರು ಉತ್ತಮ ಆರೋಗ್ಯ ಒಂದಿದ್ದ ವ್ಯಕ್ತಿಯಾಗಿದ್ದರು ಆದರೆ ಅವರ ಸಾವು ಅನಿರೀಕ್ಷಿತ ಎಂದರು.
ಅವರ ನೆಡೆದು ಬಂದ ದಾರಿ ಕುರಿತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ ಈ ಪುಸ್ತಕ ಅವರನ್ನು ಕುರಿತು ಕಿರು ಮಾಹಿತಿ ನೀಡಲಿದೆ, ನಮ್ಮ ಅವರ ಒಡನಾಟ ಬಹಳ ಹತ್ತಿರವಾದದ್ದು , ಸಣ್ಣ ಹಳ್ಳಿಯ ರೈತನ ಮಗನಾಗಿ ಜನಿಸಿದ ಅವರು ತಾಲ್ಲೂಕಿನ ನಾಯಕನಾಗಿ ಬೆಳೆದದ್ದು ಸುಲಭವಾಗಿರಲಿಲ್ಲ , ರಾಜ್ಯದಲ್ಲಿ ದೊಡ್ಡಬಳ್ಳಾಪುರ ಹಾಗೂ ಕನಕಪುರದಲ್ಲಿ ರಾಜಕೀಯ ಮಾಡುವುದು ಅಷ್ಟು ಸುಲಭವಲ್ಲ, ಸ್ಥಳೀಯ ಮಟ್ಟದ ಜೆಡಿಎಸ್ ಪಕ್ಷ ಸಂಘಟನೆ ಮಾಡುವಲ್ಲಿ ಅವರ ಕೊಡುಗೆ ಅಪಾರ, ತಳಮಟ್ಟದಿಂದ ಬೆಳೆದು ಬಂದ ನಾಯಕ ಎಂದರೇ ತಪ್ಪಾಗಲಾರದು ಎಂದರು.
ರೈತರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಅವರದ್ದು ಸಹಕಾರಿ ಕ್ಷೇತ್ರದಲ್ಲಿ ರೈತ ಮಹಿಳೆಯರಿಗೆ ಆರ್ಥಿಕವಾಗಿ ಜೀವನ ಕಟ್ಟಿಕೊಳ್ಳಲು ಅನುಕೂಲವಾಯಿತು ಅವರ ಪ್ರಾಮಾಣಿಕ ಸೇವೆ ಅವರ ವ್ಯಕ್ತಿತ್ವ ಬಿಂಬಿಸುತ್ತದೆ ಎಂದರು.
ಅವರ ಸಾವಿಗೆ ಬಾರದ ಹಿನ್ನಲೆ ಅಭಿಮಾನಿಗಳಿಗೆ ಕ್ಷಮೆ ಕೋರಿದ ಎಚ್ ಡಿ ಕೆ
ದೆಹಲಿಯಲ್ಲಿ ಪೂರ್ವನಿಯೋಜಿತಾ ಕಾರ್ಯಕ್ರಮ ನಿರ್ಧಾರವಾಗಿದ್ದ ಕಾರಣ ನಾನು ಅವರ ಸಾವಿನ ಸಂದರ್ಭದಲ್ಲಿ ಬರಲು ಸಾಧ್ಯವಾಗಲಿಲ್ಲ, ಅದಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಕೋರುತ್ತೇನೆ ಎಂದರು.
ವೇದಿಕೆಯಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಆದಿಚುಂಚನಗಿರಿ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾಂದ ಸ್ವಾಮೀಜಿ ಸೇರಿದಂತೆ ಹಾಲಿ, ಮಾಜಿ ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
