
ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದಲ್ಲಿ ನಿರ್ಗತಿಕ ಕಡುಬಡವರಿಗೆ ಆಹಾರ ವಿತರಣೆ ಜೊತೆಗೆ ವಯೋವೃದ್ಧರಿಗೆ ಹೊದಿಕೆ ವಿತರಣೆ ಮಾಡಲಾಗಿದೆ, ಸ್ವಾಮಿ ವಿವೇಕಾನಂದರ ಜಯಂತಿಯ ದಿನದಂದು ಸದಾ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಸಂಭ್ರಮಿಸುವುದು ನಮ್ಮ ತಂಡದ ಹೆಮ್ಮೆ ಎಂದು ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು
1755ನೇ ದಿನಗಳಿಂದ ನಿರಂತರವಾಗಿ ತಾಲೂಕಿನ ದರ್ಗಾ ಜೋಗಿಹಳ್ಳಿಯಲ್ಲಿ ನೆಡೆಯುತ್ತಿರುವ ಅನ್ನದಾಸೋಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಯೋವೃದ್ಧರಿಗೆ ಹೊದಿಕೆ ವಿತರಣೆ ಮಾಡಿ ಮಾತನಾಡಿದ ಅವರು ಮಲ್ಲೇಶ್ ಮತ್ತು ತಂಡ ನಿರಂತರವಾಗಿ ಅನ್ನದಾಸೋಹ ಕಾರ್ಯಕ್ರಮ ನಡೆಸುತ್ತಿದ್ದು ನಿತ್ಯ ನೂರಾರು ಹಸಿದ ಹೊಟ್ಟೆಗಳಿಗೆ ಆಹಾರ ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಅಗತ್ಯವಿರುವ ಪರಿಕರಗಳ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದ್ದಾರೆ, ಅವರ ಸಹಕಾರದೊಂದಿಗೆ ಇಂದು ವಯೋವೃದ್ದರಿಗೆ ಹೊದಿಕೆ ವಿತರಣೆ ಮಾಡಿದ್ದೇವೆ ಹಸಿದವರಿಗೆ ಆಹಾರ ವಿತರಣೆ ಮಾಡಿದ್ದೇವೆ ಈ ಕಾರ್ಯ ನಿರಂತರ ಸಾಗಲಿ ಎಂಬುದೇ ನಮ್ಮೆಲ್ಲರ ಆಶಯ ಎಂದರು.
ನಮ್ಮ ಟ್ರಸ್ಟ್ ನ ತಂಡದ ಸಹಕಾರದೊಂದಿಗೆ ನಿರಂತರವಾಗಿ ಸೇವಾ ಕಾರ್ಯಗಳು ನಡೆಯುತ್ತಿದ್ದು, ಮುಂದೆ ಮತ್ತಷ್ಟು ಸೇವಾಕಾರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿ ಶ್ರಮಿಸಲಾಗುವುದು ಎಂದರು.
ಕಾರ್ಯಕ್ರಮದ ಆಯೋಜಕ ಮಲ್ಲೇಶ್ ಮಾತನಾಡಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ಸಾಕಷ್ಟು ಸೇವಾ ಕಾರ್ಯಗಳು ನಡೆಯುತ್ತಿದ್ದು, ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ವಯೋವೃದ್ದರಿಗೆ ಹೊದಿಕೆ ವಿತರಣೆ ಮಾಡುವ ಮೂಲಕ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ವಾಗತಿಸಿದ್ದಾರೆ , ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳಿಗೂ ಸದಸ್ಯರಿಗೂ ತುಂಬು ಹೃದಯದ ಧನ್ಯವಾದಗಳು ಅರ್ಪಿಸುತ್ತೇನೆ, ಟ್ರಸ್ಟ್ ನ ಸೇವಾಕಾರ್ಯಗಳು ಮತ್ತಷ್ಟು ಹೆಚ್ಚಾಗಲಿ ಸಮಾಜಕ್ಕೆ ಟ್ರಸ್ಟ್ ನಿಂದ ಮತ್ತಷ್ಟು ಒಳಿತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಭೀಮ್ ರಾವ್ ಚವಾಣ್, ಶ್ರೀನಿವಾಸ್, ಮಂಜುನಾಥ್, ವೀರೇಶ್, ನಂಜಪ್ಪ ಸೇರಿದಂತೆ ನಿರಂತರ ಅನ್ನದಾಸೋಹ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.