ದೊಡ್ಡಬಳ್ಳಾಪುರ : ಮುಂದಿನ ಪೀಳಿಗೆಗೆ ಉತ್ತಮ ದೇಶವನ್ನು ಕಟ್ಟಿ ಕೊಡುವ ಜವಾಬ್ದಾರಿ ನಮ್ಮದಾಗಿದೆ, ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಎಲ್ಲರೂ ಒಗ್ಗೂಡಬೇಕಿದೆ ಎಂದು ಕೆ ಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ತಿಳಿಸಿದರು.
ನಗರದ ಕೆಆರ್ಎಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ನಮ್ಮ ದೇಶದ ಪ್ರತಿ ಪ್ರಜೆಯು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ. ಸಮಾಜದಲ್ಲಿ ಸರ್ವರಿಗೂ ಮೂಲಭೂತ ಹಕ್ಕು,ಸಮಾನತೆ ಸೇರಿದಂತೆ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವಲ್ಲಿ ನಮ್ಮ ಶ್ರಮ ಅತ್ಯಗತ್ಯವಾಗಿದೆ ಎಂದರು .
ಜನವರಿ 26 ಗಣರಾಜ್ಯೋತ್ಸವ ದಿನಾಚರಣೆ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ ದಿನವಾಗಿದೆ, ಈ ಸಂಭ್ರಮಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯೋತ್ಸವವಾಗಲಿ, ದೇಶದ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ಮುಕ್ತ ಸಮಾಜದ ನಿರ್ಮಾಣ ಮಾಡಲು ಸರ್ವರೂ ಪಣ ತೊಡಬೇಕಿದೆ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಎಚ್. ಎನ್.ವೇಣು, ಜಿಲ್ಲಾ ಪದಾಧಿಕಾರಿಗಳಾದ ಶ್ರೀ ಲೀಲಾ ರಾಮ್, ಮಾರುತಿ, ತಾಲೂಕು ಅಧ್ಯಕ್ಷರಾದ ನಾಗರಾಜ್, ಉಪಾಧ್ಯಕ್ಷರಾದ ಶ್ರೀನಿವಾಸ್, ಕಾರ್ಯದರ್ಶಿ ಮುರಾರಿ, ಮಹಿಳಾ ಘಟಕದ ಅಧ್ಯಕ್ಷರಾದ ರಂಜಿತಾ, ಲಲಿತಾಮ್ಮ , ಮಂಜುಳಾ, ದೊಡ್ಡಬಳ್ಳಾಪುರ ಕಾರ್ಮಿಕ ಘಟಕದ ಅಧ್ಯಕ್ಷರಾದ ಫರುಕ್, ಮೌಲ, ವಿಜಯ್, ಹೇಮಂತ್ ಕುಮಾರ್, ತಾಜ್ ಮಂಜುನಾಥ್, ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಕೆ ಎಸ್ ಪಕ್ಷದ ಸೇನಾನಿಗಳು ಉಪಸ್ಥಿತರಿದ್ದರು.

