ದೊಡ್ಡಬಳ್ಳಾಪುರ : ಕರ್ನಾಟಕ ಚಾಲಕ ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆಡೆದಿದ್ದು, ತಾಲೂಕು ಚಾಲಕರ ಘಟಕದ ಅಧ್ಯಕ್ಷರಾಗಿ ಅವಿನಾಶ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಯ್ಕೆಯಾದ ನೂತನ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳು ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿ ಶುಭಹಾರೈಸಿದ್ದಾರೆ.
ಈ ಕುರಿತು ನೂತನ ಅಧ್ಯಕ್ಷ ಅವಿನಾಶ್ ಮಾತನಾಡಿ ಚಾಲಕರ ಸಮಸ್ಯೆಗಳು ಸಾಕಷ್ಟಿವೆ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಸಂಘದ ಬಲವರ್ತನೆಗೆ ಹೆಚ್ಚು ಒತ್ತು ನೀಡುವ ಮೂಲಕ ಚಾಲಕರ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲಾಗುವುದು, ಸಂಘದ ಅಭಿವೃದ್ಧಿಗೆ ಶ್ರಮಿಸಲು ಉತ್ತಮ ಅವಕಾಶ ದೊರೆತಿದ್ದು, ಈ ಸದಾವಕಾಶ ಕಲ್ಪಿಸಿದ ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು .

