
ರಾಜ್ಯ ಯುವ ಕಾಂಗ್ರೆಸ್ ತೂಬಗೆರೆ ಹೋಬಳಿ ಅಧ್ಯಕ್ಷರಾಗಿ ಹಿರೇಮುದ್ದೇನಹಳ್ಳಿಯ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ
ಎಐಸಿಸಿ ಚುನಾವಣಾ ಸಮಿತಿ ಯುವ ಕಾಂಗ್ರೆಸ್ ನ ಎಲ್ಲ ಹಂತದ ಘಟಕಗಳಿಗೆ ನೋಂದಣಿ ಮಾಡಿಕೊಂಡಿತ್ತು, ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ ಮತದಾನ ನಡೆದಿತ್ತು, ಅತಿ ಹೆಚ್ಚು ನೋಂದಣಿ ಮಾಡಿಸಿದ ಅಭ್ಯರ್ಥಿ ವಿಚೇತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನರಸಿಂಹಮೂರ್ತಿ 960 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.
ನೂತನ ಅಧ್ಯಕ್ಷರಾದ ನರಸಿಂಹಮೂರ್ತಿಯವರಿಗೆ ಹಳ್ಳಿರೈತ ಅಂಬರೀಶ್ ಅಭಿನಂದನೆ ಸಲ್ಲಿಸಿದ್ದಾರೆ, ಇದೇ ವೇಳೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನರಸಿಂಹಮೂರ್ತಿಯರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಹಿಂದುಳಿದ ಸಮುದಾಯಕ್ಕೆ ಸಿಕ್ಕ ಗೌರವ ಎಂದರು
ನೂತನ ಅಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಶುಭಹಾರೈಸಿದ್ದಾರೆ.