
ಬೆಂಗಳೂರು ಗ್ರಾಮಾಂತರ : ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವಿದ್ಯುತ್ ಗುತ್ತಿಗೆದಾರರ ಸಂಘ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೇವನಹಳ್ಳಿಯ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಇಂತಿದೆ:
ಅಧ್ಯಕ್ಷರಾಗಿ ಹರೀಶ್ ಬೆಟ್ಟಹಳ್ಳಿ, ಉಪಾಧ್ಯಕ್ಷರಾಗಿ ನಾಗರಾಜ್, ರಾಜಣ್ಣ, ಕಾರ್ಯದರ್ಶಿಯಾಗಿ ಬೈರೇಗೌಡ, ಖಜಾಂಚಿಯಾಗಿ ಬಾಬು ,ಸಹ ಕಾರ್ಯದರ್ಶಿಯಾಗಿ ಮದನ್, ಸಂಘಟನಾ ಕಾರ್ಯದರ್ಶಿಯಾಗಿ ರವೀಶ್ ಆಯ್ಕೆ ಯಾಗಿದ್ದಾರೆ.
ಜಿಲ್ಲಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಪ್ರವಾಸ ಸಮಿತಿಯ ನೂತನ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಇಂತಿದೆ:
ಸಂಘದ ಗೌರವ ಅಧ್ಯಕ್ಷರಾಗಿ ಜಿ.ವಿ. ಲಕ್ಷ್ಮಯ್ಯ, ದೊಡ್ಡಬಳ್ಳಾಪುರ ತಾಲ್ಲೂಕ ಅಧ್ಯಕ್ಷರಾಗಿ ಟಿ. ಕೆ. ಆನಂದ್, ಉಪಾಧ್ಯಕ್ಷರಾಗಿ ಮುನಿರಾಜ್ಅರಸ್, ಖಜಾಂಚಿಯಾಗಿ ಸಿ ನಾಗರಾಜ್ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಸಮಿತಿ ಅಧ್ಯಕ್ಷರಾದ ಶ್ರೀ ಮಂಜುನಾಥ್ (ಹುರಳಹಳ್ಳಿ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್. ಎ ಶುಭ ಹಾರೈಸಿ ಮಾತನಾಡಿದ ಅವರು ಉತ್ತಮ ಸೇವೆ ಸಲ್ಲಿಸುವ ಉದ್ದೇಶದಿಂದ ನಮ್ಮ ವಿದ್ಯುತ್ ಗುತ್ತಿಗೆದಾರರ ಸಂಘಕಾರ್ಯ ನಿರ್ವಹಿಸುತ್ತಿದ್ದೂ ನೂತನ ಪದಾಧಿಕಾರಿಗಳು ತಮ್ಮ ತಾಲ್ಲೂಕು ಮಟ್ಟದಲ್ಲಿ ಸಂಘಟನೆ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸುವ ಮೂಲಕ ಸಂಘದ ಗೌರವ ಹೆಚ್ಚಿಸುವ ಕಾರ್ಯವಾಗಲಿ, ಉತ್ತಮ ಕಾರ್ಯಕ್ಕೆ ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘ ಸದಾ ನಿಮ್ಮ ಬೆಂಬಲವಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಮುರುಳಿ,ನಾರಾಯಣಸ್ವಾಮಿ.ಶಶಿಕುಮಾರ್.ಗಿರೀಶ್.ನಟರಾಜ್, ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.