
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇವರ ಹುಟ್ಟು ಹಬ್ಬದ ಅಂಗವಾಗಿ ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ನಿರಾಶ್ರಿತ ಕಡುಬಡವರಿಗೆ ಆಹಾರ ವಿತರಣೆ ಮಾಡಲಾಯಿತು.
1818 ನೇ ದಿನದ ಅನ್ನ ದಾಸೋಹಕ್ಕೆ ಡಾ. ಶಿವರಾಜಕುಮಾರ್ ಹಾಗೂ ಡಾ.ಪುನೀತ್ ರಾಜಕುಮಾರ್ ರವರ ಅಭಿಮಾನಿಗಳು ಸಹಾಯ ಹಸ್ತ ನೀಡುವ ಮೂಲಕ ಕೇಕ್ ಕತ್ತರಿಸಿ ಸಿಹಿ ವಿತರಣೆ ಹಾಗೂ ಆಹಾರ ವಿತರಣೆ ಮಾಡುವ ಮೂಲಕ ಸಂಭ್ರಮಿಸಿದರು.
ಬೆಂಗಳೂರು ಗ್ರಾಮಾಂತರ ಡಾ.ಶಿವರಾಜ್ ಕುಮಾರ್ ಸಂಘದ ಜಿಲ್ಲಾಧ್ಯಕ್ಷರಾದ ಡಿ .ಸಿ.ಚೌಡರಾಜ್ ಮಾತನಾಡಿ ರಾಜ್ ಕುಟುಂಬವೂ ಸದಾ ಕೇವಲ ನಟನೆಯಿಂದ ಅಷ್ಟೇ ಅಲ್ಲದೆ ಸೇವಾ ಕಾರ್ಯಗಳಿಂದ ಜನರಿಗೆ ತುಂಬಾ ಹತ್ತಿರವಾಗಿದೆ. ಪುನೀತ್ ರಾಜಕುಮಾರ್ ಅವರ ಸೇವಾ ಕಾರ್ಯಗಳು ನಮಗೆ ಸದಾ ಸ್ಪೂರ್ತಿ , ಇಂದು ಅವರ ಹೆಸರಿನಲ್ಲಿ ಅನ್ನದಾನ ಮಾಡುತ್ತಿರುವುದು ಸಂತಸ ತಂದಿದೆ , ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಯೋಜನೆ ಮಾಡಿಕೊಟ್ಟ ಮಲ್ಲೇಶ್ ಮತ್ತು ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು.
ಪುನೀತ್ ರಾಜ್ ಕುಮಾರ್ ಸಂಘದ ತಾಲೂಕು ಕಾರ್ಯಾಧ್ಯಕ್ಷ ಡಿ. ಎನ್.ತಿಮ್ಮರಾಜು ಹಾಗೂ ತಾಲ್ಲೂಕು ಅಧ್ಯಕ್ಷರಾದ ಮಂಜುನಾಥ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಪುನೀತ್ ರಾಜಕುಮಾರ್ ರವರು ಸದಾ ಅಮರ , ಅವರ ಅಭಿಮಾನಿಗಳ ಸೇವಾ ಕಾರ್ಯಗಳಲ್ಲಿ ಅವರು ಸದಾ ನಮ್ಮೊಂದಿಗಿದ್ದಾರೆ , ಅವರ ಆಶಯದಂತೆ ನಾವು ಜೀವನ ನಡೆಸುತ್ತೇವೆ, ಮುಂದೆ ಉತ್ತಮ ಸೇವಾ ಕಾರ್ಯಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಅವರ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಡಾ. ಶಿವರಾಜಕುಮಾರ್ ಸಂಘದ ಪದಾಧಿಕಾರಿಗಳು, ಡಾ.ಪುನೀತ್ ರಾಜಕುಮಾರ್ ಸಂಘದ ಎಲ್ಲಾ ಪದಾಧಿಕಾರಿಗಳು, ಅಭಿಮಾನಿಗಳು ಹಾಜರಿದ್ದರು.