
ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ಗುರುಪೀಠದಲ್ಲಿ ಸಾಮಾಜಿಕ ಅರಣಿಕರಣ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದ ಸ್ವಾಮಿಜಿ ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಮಾತಾನಾಡಿದ ಸ್ವಾಮಿಜಿ ಗಳು,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಅದರಲ್ಲಿ ವಿಶೇಷವಾಗಿ ಕೆರೆ ಹೂಳೆತ್ತುವ ಕಾರ್ಯಕ್ರಮ ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ಉತ್ತಮ ಆಗಿದ್ದು ಮದ್ಯವರ್ಜನ ಶಿಬಿರಗಳು ನಡೆಯುತ್ತಿದ್ದು ಅತೀ ಉತ್ತಮ ಕಾರ್ಯಕ್ರಮ ಎಂದು ಅಭಿಪ್ರಾಯಪಟ್ಟರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯಾದ್ಯಂತ ಪ್ರತಿ ವರ್ಷ ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ಯಶಸ್ವಿಯಾಗಿ ಆಗುತ್ತಿದ್ದು ಗಿಡ ನಾಟಿ ಮಾಡಿದ ನಂತರ ಗಿಡಗಳ ರಕ್ಷಣೆ ಅತೀ ಮುಖ್ಯವಾಗಿದ್ದು ಎಂದರು ಪ್ರತಿಯೊಬ್ಬರೂ ಮನೆ ಹತ್ತಿರ/ಜಮಿನುಗಳಲ್ಲಿ ಗಿಡ ನಾಟಿ ಮಾಡುವಂತೆ ತಿಳಿಸಿದರು
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್ ಜನಜಾಗೃತಿ ಸದಸ್ಯರಾದ ರಮೇಶ್, ಪ್ರಗತಿಪರ ರೈತರಾದ ಸದಾನಂದ,ಕೃಷ್ಣೆಗೌಡ,ಗ್ರಾಮ ಪಂಚಾಯತ್ ಸಧಸ್ಯರಾದ ಆನಂದ್,ಡೈರಿ ಅಧ್ಯಕ್ಷರಾದ ರಾಮಣ್ಣ, ಒಕ್ಕೂಟದ ಅಧ್ಯಕರುಗಳು, ತಾಲೂಕಿನ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ವಲಯ ಮೇಲ್ವಿಚಾರಕರಾದ ಗಿರೀಶ್,TNO ರೇಣುಕಾ ಪ್ರಸಾದ್, ಶೌರ್ಯ ವಿಪತ್ತು ತಂಡದ ಸದಸ್ಯರು, ಸೇವಾ ಪ್ರತಿನಿಧಿಗಳು , VLE ,ಸಂಘದ ಸದಸ್ಯರು,ಮಠದ ಅಧಿಕಾರಿಗಳು ಉಪಸ್ಥಿತರಿದ್ದರು