
ಬೆಂಗಳೂರು : ಡಾ. ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೀಸಲಾತಿ ವಿಷಯದಲ್ಲಿಯೂ ಯಾವುದೇ ತಡ ವಿಲ್ಲದೆ ಮುಂದಿನ 30ರಿಂದ 40 ದಿನಗಳ ಹೊಳಗಾಗಿ ಒಳ ಮೀಸಲಾತಿ ಅನುಷ್ಠಾನವಾಗಲಿದೆ ಎಂದರು.
ಬಾಬೂಜಿಯವರ ಆಶಯದಂತೆ ಕರ್ನಾಟಕ ಸರ್ಕಾರದ ದೀನದಲಿತರ ಬಡವರ ಪರವಾಗಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ಇನ್ನೂ 30ರಿಂದ 40 ದಿನಗಳ ಒಳಗಾಗಿ ಒಳ ಮೀಸಲಾತಿ ಅನುಷ್ಠಾನವಾಗಲಿದೆ ಎಂದರು.
ನಮ್ಮ ಸೋದರ ಸಚಿವರುಗಳಾದ ಪರಮೇಶ್ವರ್, ಮಹದೇವಪ್ಪ,ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ ಎಲ್ಲಾ ಸಚಿವರು ಒಗ್ಗಟ್ಟಾಗಿದ್ದು ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಅನುಷ್ಠಾನಗೊಳಿಸಲು ಬದ್ದರಾಗಿದ್ದೇವೆ ಎಂದರು.