
ದೊಡ್ಡಬಳ್ಳಾಪುರ : ಹದಿನೆಂಟು ವರ್ಷಗಳ ನಿರಂತರ ಕಲಾ ಸೇವೆ ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಹಳ್ಳಿ ಪ್ರತಿಭೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದು ಸಂತಸ ತಂದಿದೆ ಎಂದು ಕಲಾವಿದೆ ಪಾರ್ವತಮ್ಮ ತಿಳಿಸಿದ್ದಾರೆ.
ಸೋಬಾನೇ ಪದ, ಭಜನೆ,ಭಕ್ತಿ ಗೀತೆ ,ಚಿತ್ರಗೀತೆಗಳು ಸೇರಿದಂತೆ ಹಲವು ಬಗೆಯ ಹಾಡುಗಳನ್ನು ಹಾಡುವ ಮೂಲಕ ಸತತ 18 ವರ್ಷಗಳ ಕಲಾ ಸೇವೆ ಸಲ್ಲಿಸಿದ್ದೇನೆ, ಕೌಟುಂಬಿಕ ಸಂಕಷ್ಟಗಳ ನಡುವೆಯೂ ಛಲ ಬಿಡದೆ ನಿರಂತರ ಕಲಾ ಸೇವೆಗೆ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ , ಬೇರೆಯವರು ಹಾಡುವಾಗ ನನಗೂ ಆಡಬೇಕು ಅನಿಸುತ್ತಿತ್ತು ಹಾಗಾಗಿ ಹಾಡುವುದನ್ನು ಕಲಿತೆ ಮನೆಯಲ್ಲಿ ನಿರಂತರ ವಿರೋಧ ವ್ಯಕ್ತವಾಗುತ್ತಿದ್ದರು ಛಲ ಬಿಡದೆ ನನ್ನದೇ ಸ್ವಂತ ತಂಡವನ್ನು ಕಟ್ಟಿಕೊಂಡು ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದೇನೆ, ಇಂದು ನಾನು ಮಾಡಿರುವ ಸೇವೆಯನ್ನು ಗುರುತಿಸಿ
ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರ ನೀಡಿದೆ, ಮುಂದೆ ನನ್ನಂತೆ ನಾ ತಂಡದವರು ಸಹ ಡಾಕ್ಟರೇಟ್ ಪಡೆಯುವ ಮಟ್ಟಕ್ಕೆ ಬೆಳೆಯಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಕಲಾವಿದೆ ಪಾರ್ವತಮ್ಮ ಹೇಳಿದ್ದಾರೆ .
ಇಂದಿನ ಮಕ್ಕಳು ಕೇವಲ ಮೊಬೈಲ್ ಗೆ ಸೀಮಿತರಾಗಿದ್ದಾರೆ ಅವರನ್ನು ಇಂತಹ ಜನಪದ ಕಲೆಗಳತ್ತಾ ಸೆಳೆಯುವರಿಟ್ಟಿನಲ್ಲಿ ತರಬೇತಿ ಕೊಡಿಸುವ ಉದ್ದೇಶ ನನ್ನದು ಹಾಗಾಗಿ ಮನೆಯಲ್ಲಿ ಅಗತ್ಯವಿರುವ ಸಂಗೀತ ವಾದ್ಯಗಳನ್ನು ಪರಿಮಿತಿ ಪಡೆದಿರುವ ಶಿಕ್ಷಕರನ್ನು ನೇಮಿಸುವ ಮೂಲಕ ಮಕ್ಕಳಿಗೆ ಸಂಗೀತ ಜ್ಞಾನ ಕೊಡಲು ಮುಂದಾಗಿದ್ದೇವೆ ಎಂದಿದ್ದಾರೆ.
ಕಲಾವಿದ ಅರುಣ್ ಮಾತನಾಡಿ ಯಾವುದೇ ಅಪೇಕ್ಷೆ ಇಲ್ಲದೆ ಕೇವಲ ಜನಪದ ಸಾಹಿತ್ಯವನ್ನು ಉಳಿಸುವ ನಿಟ್ಟಿನಲ್ಲಿ ನಿತ್ಯ ನಿರಂತರ ಸೇವೆ ಸಲ್ಲಿಸುತ್ತಿದ್ದೇವೆ ನಮ್ಮ ಸೇವೆಯನ್ನು ಗುರುತಿಸಿ ನಮ್ಮ ತಾಯಿಯವರಿಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತಸದ ವಿಷಯವಾಗಿದೆ , ಈ ಗೌರವ ಡಾಕ್ಟರೇಟ್ ಪದವಿ ನಾವು ಮತ್ತಷ್ಟು ಹೆಚ್ಚಿನ ಕೆಲಸ ನಿರ್ವಹಿಸಲು, ಮತ್ತಷ್ಟು ಸೇವೆ ಸಲ್ಲಿಸಲು ಶಕ್ತಿ ತುಂಬಿದೆ, ಕಲಾವಿದರನ್ನು ಬೆಳೆಸುವ ಹಾರೈಸುವ ಇಂತಹ ಸಂಸ್ಥೆಗಳು ಮತ್ತಷ್ಟು ಹೆಚ್ಚಾಗಲಿ , ಮೂಲ ಜನಪದ ಉಳಿಯಲಿ ಎಂದು ತಿಳಿಸಿದರು.
ನಮ್ಮ ತಂಡದಲ್ಲಿ ( ಪಾರ್ವತಮ್ಮ, ಒಬ್ಬಮ್ಮ,ಮುನಿಯಮ್ಮ, ನರಸಮ್ಮ, ಅರ್ಚನಾ, ರಾಜಮ್ಮ,ಕಮಲಮ್ಮ,ರತ್ನಮ್ಮ ) 12ಕ್ಕೂ ಹೆಚ್ಚು ಮಂದಿ ಗಾಯಕರಿದ್ದು ಸೌಲಭ್ಯಗಳ ಕೊರತೆಯಿಂದ ಸೂಕ್ತ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ, ಸರ್ಕಾರವು ಜನಪದ ಕಲಾವಿದರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ಮೂಲಕ ಜನಪದ ಉಳಿವಿಗೆ ಸಹಕರಿಸಬೇಕಿದೆ ಎಂದರು.