ಬಿಜೆಪಿ ಪಕ್ಷದವರು ನಮ್ಮ ಸರ್ಕಾರದ ವಿರುದ್ಧ ಜನಕ್ರೋಶ ಪ್ರತಿಭಟನೆ ಮಾಡುವ ಬದಲು 11ವರ್ಷಗಳಿಂದ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಆಯೋಜನೆ ಮಾಡಲಾಗಿದ್ದ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಆಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಬಿಜೆಪಿ ಪಕ್ಷದವರು ಸದಾ ಹೇಳ್ತಾರೆ ನಮ್ಮ ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿಯಾಗಿದೆ, ಸರ್ಕಾರ ದಿವಾಳಿಯಾಗಿದೆ ಅಂತಾರೆ, ಆದರೆ ನೆನಪಿರಲಿ ಈ ಬಾರಿ 38000ಕೋಟಿ ಹೆಚ್ಚಿನ ಬಜೆಟ್ ಮಂಡನೆ ಮಾಡಿದ್ದೇವೆ. ನಮ್ಮ ಸರ್ಕಾರ ದಿವಾಳಿಯಾಗಿಲ್ಲ, ದಿವಾಳಿಯಾಗಿದ್ದಾರೆ ನೂತನ ಯೋಜನೆಗಳ ಶಂಕುಸ್ಥಾಪನೆ ಮಾಡಲು ಸಾಧ್ಯವೇ ಎಂದರು.
ಕಾಶ್ಮೀರದಲ್ಲಿ ನೆಡೆದಿರುವ ಉಗ್ರರ ದಾಳಿಯನ್ನು ನಾವು ಖಂಡಿಸುತ್ತೇವೆ, ಭಯೋತ್ಪಾದನೆ ಉಗ್ರರ ದಾಳಿಯನ್ನು ನಾವು ಎಂದಿಗೂ ಸಹಿಸಲ್ಲ ಯುದ್ಧದ ಕುರಿತು ನನ್ನ ಹೇಳಿಕೆ ತಿರುಚಲಾಗಿದೆ, ದೇಶದಲ್ಲಿ ಭಯೋತ್ಪಾದಕ ಕೃತ್ಯ ಗಳನ್ನು ಬೇರು ಸಮೇತ ಕೀಳಬೇಕಿದೆ. ದೇಶಕ್ಕೆ ನಾಡಿಗೆ ಧಕ್ಕೆ ಆದರೆ ನಾವು ಸುಮ್ಮನಿರಲ್ಲ, ಇದು ಬುದ್ಧ ಬಸವಣ್ಣನವರ ನಾಡು ನಾವು ಯಾರ ಸುದ್ದಿಗೂ ಹೋಗಲ್ಲ ನಮ್ಮ ತಂಟೆಗೆ ಬಂದ್ರೆ ಸುಮ್ನೆ ಬಿಡೋ ಮತ್ತೆ ಇಲ್ಲ,
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 1000ಕ್ಕೂ ಅಧಿಕ ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ಮಾಡಿದ್ದೇವೆ ಸ್ಥಳೀಯ ಶಾಸಕರ ಮುಖಂಡರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವೀಯಾಗಿದೆ ಎಂದರು

ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವರು ಡಾ. ಎಚ್.ಸಿ ಮಹಾದೇವಪ್ಪ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರು ಜಮೀರ್ ಅಹ್ಮದ್ ಖಾನ್, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವರು ಕೃಷ್ಣ ಬೈರೇಗೌಡ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಎನ್.ಎಸ್ ಬೋಸರಾಜು ಸೇರಿದಂತೆ ಹಲವರು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು.
