
ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯೊಳಗಿನ ಹೋರ್ಡಿಂಗ್ಸ್ ಗಳಲ್ಲಿ ಕನ್ನಡವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಈ ಕುರಿತು ದೊಡ್ಡಬಳ್ಳಾಪುರ ವತಿಯಿಂದ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ ) ಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು
ಈ ಕುರಿತು ಮಾತನಾಡಿದ ಅವರು ನಗರಸಭೆ ವ್ಯಾಪ್ತಿಯಲ್ಲಿ ಹಲವಾರು ಹೋರ್ಡಿಂಗಗಳಿದ್ದು ಅದರಲ್ಲಿ ಪ್ರದರ್ಶಿಸುವ ಜಾಹೀರಾತುಗಳಲ್ಲಿ ಪ್ರಮುಖವಾಗಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಫಲಕದ ತುಂಬಾ ಆಂಗ್ಲ ಭಾಷೆ ರಾರಾಜಿಸುತ್ತಿರುತ್ತದೆ ಹಾಗೂ ಕೆಲವು ಫಲಕಗಳಲ್ಲಿ ಅಶ್ಲೀಲ ಚಿತ್ರಗಳು ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ತೀವ್ರ ಮುಜುಗರ ತರಿಸುವಂತಿರುತ್ತವೆ, ಅಲ್ಲಿ ಮಹಿಳೆಯರು ಓಡಾಡಲು ಕೂಡ ಮುಜುಗರವಾಗುತ್ತದೆ ಈ ಕುರಿತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.
ನಗರಸಭೆ ಈ ಕೂಡಲೇ ಸಂಬಂಧಪಟ್ಟ ಫಲಕಗಳ ಮಾಲೀಕರಿಗೆ ತುರ್ತು ಸಭೆ ನಡೆಸಿ ಅವರು ಕಡ್ಡಾಯವಾಗಿ ಕನ್ನಡ ಭಾಷೆ ಹಾಗೂ ಅಶ್ಲೀಲವೆನಿಸುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ನಿಯಮ ಪಾಲಿಸಲು ಆದೇಶಿಸಬೇಕು ಹಾಗೂ ಈಗಾಗಲೇ ಕನ್ನಡ ಬಾಷೆ ನಿರ್ಲಕ್ಷಿಸಿರುವ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಬೇಕು ಇಲ್ಲವಾದಲ್ಲಿ ಕರವೇ ನೇರ ಕಾರ್ಯಾಚರಣೆಯ ಮೂಲಕ ತೆರವುಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದರು.