
ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಶಾಂತಿಯುತ ಮುಕ್ತಾಯವಾಗಿದ್ದು, ದೊಡ್ಡಬಳ್ಳಾಪುರ ಮತ ಕ್ಷೇತ್ರದ ಎಣಿಕೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹುಸ್ಕೂರು ಆನಂದ್ ರವರು ತನ್ನ ಸ್ವರ್ಧೆಯ ಅನರ್ಹತೆ ಪ್ರಶ್ನಸಿ ಹೈಕೋರ್ಟ್ ಮೊರೆ ಹೋಗಿ ಮಧ್ಯಂತರ ಆದೇಶ ಪಡೆದು ಕಣಕ್ಕಿಳಿದಿದ್ದರು. ಆದರೆ ಈಗ ಈ ಪ್ರಕರಣದ ತೀರ್ಪು ಬರುವವರೆಗೂ ಎಣಿಕೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ.