ದೊಡ್ಡಬಳ್ಳಾಪುರ : ಬಮೂಲ್ ನಿರ್ದೇಶಕ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಎಂ ಪಿ ಸಿ ಎಸ್ ಅಧ್ಯಕ್ಷರು ನೀಡಿರುವ ತೀರ್ಪುನ್ನು ಕಾಂಗ್ರೆಸ್ ಪಕ್ಷವು ಒಪ್ಪಿಕೊಂಡಿದೆ, ಆದರೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿ ತಾಲ್ಲೂಕಿನಲ್ಲಿ 10ವರ್ಷಗಳ ಸುದೀರ್ಘ ಆಡಳಿತ ನೆಡೆಸಿರುವ ಮಾಜಿ ಶಾಸಕರ ವಿರುದ್ಧ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದು ಕೆ ಪಿ ಸಿ ಸಿ ಸದಸ್ಯ ಜಿ. ಲಕ್ಷ್ಮೀಪತಿ ತಿಳಿಸಿದರು

ನಗರದಲ್ಲಿ ಪ್ರವಾಸಿಮಂದಿರದಲ್ಲಿ ನೆಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಬಮೂಲ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿ ಬಿ ಸಿ ಆನಂದ್ ಕುಮಾರ್ ಬೆಳ್ಳಿಗೆ ಸಭೆಯಲ್ಲಿ ಕೆ ಪಿ ಸಿ ಸಿ ಉಪಾಧ್ಯಕ್ಷರು ತಾಲ್ಲೂಕಿನ ನಿಕಟಪೂರ್ವ ಶಾಸಕ ಟಿ ವೆಂಕಟರಮಣಯ್ಯ ಅವರನ್ನು ಬೈತಾರೆ ಮಧ್ಯಾಹ್ನ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೆ ಹಾರ ಕೊಡ್ತೆರೆ ಅವರು ಯಾವ ಪಕ್ಷದ ಬೆಂಬಲಿಗರು ಎಂಬುದನ್ನು ಸ್ಪಷ್ಟಪಡಿಸಿಕೊಳ್ಳಲಿ ಎಂದರು.
ನೂತನ ಬಮೂಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್ ಹಿರಿಯರ ಕುರಿತು ಸೌಜನ್ಯವಾಗಿ ಮಾತನಾಡಲಿ ಚುನಾವಣೆಗಳಲ್ಲಿ ಗೆಲುವು ಸೋಲು ಸರ್ವೇ ಸಾಮಾನ್ಯ ಅದನ್ನು ಜಯಗಳಿಸಿರುವ ಅಭ್ಯರ್ಥಿ ಅರಿತುಕೊಳ್ಳಬೇಕು ಎಂದರು.
ಬಿಜೆಪಿ ಪಕ್ಷದ ಛಲವಾದಿ ನಾರಾಯಣ ಸ್ವಾಮಿ ಸಚಿವ ಪ್ರಿಯಾಂಕಾ ಖರ್ಗೆ ಅವರನ್ನು ನಾಯಿ ಎಂದು ಸಂಭೋದನೆ ಮಾಡುವುದು ಖಂಡನೀಯ ಅವರು ಈ ಕೂಡಲೇ ಬೇಷರತ್ತಾಗಿ ಸಾಮೂಹಿಕ ಕ್ಷಮೆಯಾಚಿಸಬೇಕು ಎಂದು ಅಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಮಾತನಾಡಿ ಕೇಂದ್ರೀಯ ಸಂಸ್ಥೆಗಳಾದ ಸಿಬಿಐ ಇ ಡಿ, ಐ ಟಿ ಇಲಾಖೆಗಳನ್ನು ಕೇಂದ್ರ ಸರ್ಕಾರ ದುರ್ಬಳಕ್ಕೆ ಮಾಡಿಕೊಳ್ಳುತ್ತಿರುವ ಕುರಿತು ಸುಪ್ರೀಂ ಕೋರ್ಟ್ ಚಿಮರಿ ಹಾಕಿದೆ ಅಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಸಹಿಸದ ಬಿಜೆಪಿ ಈ ಕೃತ್ಯಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಕಸಬಾ ಎಸ್ಸಿ ಎಸ್ಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆಯವರನ್ನು ನಾಯಿಗೆ ಹೋಲಿಸಿರುವುದು ಸರಿಯಲ್ಲ, ರಾಜಕಾರಣದಲ್ಲಿ ಯಾರೂ ಶಾಶ್ವತವಲ್ಲ ಅವರ ಕುಟುಂಬದೊಂದಿಗೆ ಇದ್ದು, ಬೆಳೆದು ಇಂದು ಕೋಮುವಾದಿ ಬಿಜೆಪಿ ಪಕ್ಷಗದೊಂದಿಗೆ ಸೇರಿ ಅವರ ತಾಳಕ್ಕೆ ತಕ್ಕಂತೆ ಕುಣಿದು ನಾಯಿಗೆ ಹೋಲಿಕೆ ಮಾಡಿರುವುದು ಖಂಡನೀಯ, ಛಲವಾದಿ ನಾರಾಯಣಸ್ವಾಮಿ ಅವರು ಕೂಡಲೆ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.
ನಗರ ಎಸ್ಸಿ ಘಟಕದ ಅಧ್ಯಕ್ಷ ಮುನಿರಾಜ್ ಅವರು ಮಾತನಾಡಿ ಬಿಜೆಪಿ ನಾಯಕರನ್ನು ಮೆಚ್ಚಿಸುವ ಒಂದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆಯವರನ್ನು ಅವಾಚ್ಯ ಶಬ್ದಗಳಿಂದ ನಿಂದನೇ ಮಾಡಿರುವುದು ಖಂಡನೀಯ, ಕೂಡಲೇ ಛಲವಾದಿ ನಾರಾಯಣಸ್ವಾಮಿ ಕ್ಷಮೆ ಕೋರಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿ ಮುಖಕ್ಕೆ ಮಸಿ ಬಳಿಯ ಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ಇನ್ನು ರಾಜಕಾರಣದಲ್ಲಿ ಇದುವರೆಗೂ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಬೆಳೆದ ರಾಜಕಾರಣಿ ಗೃಹ ಸಚಿವ ಜಿ.ಪರಮೇಶ್ವರ್ ಅವರ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸುತ್ತಿರುವುದುನ್ನು ನಮ್ಮ ಪಕ್ಷ ಖಂಡಿಸುತ್ತದೆ. ಇದೇ ರೀತಿ ಮುಂದುವರೆದರೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುವ ಕೆಲಸ ಮಾಡಲಾಗುವುದು ಎಂದರು.
ನಗರಸಭಾ ಸದಸ್ಯರಾದ ಶಿವಣ್ಣ ಮಾತನಾಡಿ, ಪ್ರಿಯಾಂಕ್ ಖರ್ಗೆಯವರ ಏಳಿಗೆಯನ್ನು ಸಹಿಸದೇ ಛಲವಾದಿ ನಾರಾಯಣಸ್ವಾಮಿ ನಾಯಿಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಸ್ಥಾನ ಪಡೆದುಕೊಂಡಿರಿವುದು ಪ್ರಿಯಾಂಕ್ ಖರ್ಗೆಯನ್ನ ಟಾರ್ಗೆಟ್ ಮಾಡಿ ಖಂಡಸೋಕೆ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಕಂಟನಕುಂಟೆ ಕೃಷ್ಣಮೂರ್ತಿ,ದಲಿತ ಮುಖಂಡ ಟಿ.ಮಂಜುನಾಥ್, ಶ್ರೀನಿವಾಸ್ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
