2025-26ನೇ ಸಾಲಿನಲ್ಲಿಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ. ಐ.ಟಿ.ಐ, ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ) ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು https://shp.karnataka.gov.in ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಜೂನ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ವಿದ್ಯಾರ್ಥಿನಿಲಯಗಳಲ್ಲಿ ಶೇ.75ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಜನಾಂಗದ ವಿದ್ಯಾರ್ಥಿಗಳು (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ) ಮತ್ತು ಶೇ.25ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗಗಳ, ಪ.ಜಾ/ಪ.ಪಂಗಡ ವಿದ್ಯಾರ್ಥಿಗಳಿಗೆ ನೀಡಲಾಗುವುದು.
Ad
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ:8277799990 ಸಂಪರ್ಕಿಸಬಹುದು ಹಾಗೂ ನಿಲಯಪಾಲಕರು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ವಿಶ್ವನಾಥಪುರ, ದೇವನಹಳ್ಳಿ ತಾಲ್ಲೂಕು. ಶ್ರೀ ತಿಪ್ಪೇಸ್ವಾಮಿ ಎನ್. 9731017483. ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ದಂಡುಪಾಳ್ಯ, ಹೊಸಕೋಟೆ ತಾಲ್ಲೂಕು. ಶ್ರೀ.ನರೇಂದ್ರ 9742998287. ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು. ಶ್ರೀಮತಿ ರಾಧಾಮಣಿ 9886400832.ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಜಯನಗರ, ನೆಲಮಂಗಲ ತಾಲ್ಲೂಕು. ಶ್ರೀ ಕೃಷ್ಣ ಎಂ ಆರ್ 8317403213 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
