
ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಸಹಕಾರ ಇಲಾಖೆ ಸಹಯೋಗದೊಂದಿಗೆ 2024-25ನೇ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ರೈತರಿಂದ ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ 2445 ರೂ.ಗಳ ದರ ನಿಗದಪಡಿಸಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ವತಿಯಿಂದ ಖರೀದಿ ಮಾಡಲಾಗುವುದು.
ನೋಂದಣಿ ಮತ್ತು ಖರೀದಿ ಕೇಂದ್ರವನ್ನು ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಎಸ್.ಎಫ್.ಸಿ ಬ್ಯಾಂಕ್ ಇಲ್ಲಿ ನಿರ್ಮಿಸಲಾಗಿದ್ದು ಜೂನ್ 04 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಜಿಲ್ಲೆಯ ಎಲ್ಲಾ ರೈತರು ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಹಸಿಶುಂಠಿ ಖರೀದಿ ಅನುಕೂಲವನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ/ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಖಾತೆಯ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆಯಾಗಿರಬೇಕು), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ(FID)ಯನ್ನು ಕಡ್ಡಾಯವಾಗಿ ಹೊಂದಿರಬೇಕು.
FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ(FID)ಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.
ಬೆಳೆ ಸಮೀಕ್ಷೆಯಲ್ಲಿ ಹಸಿಶುಂಠಿ ಬೆಳೆ ಎಂದು RTC ವಾರು ನಮೂದಿಸಿರುವ ರೈತರು ಮಾತ್ರ ಇದಕ್ಕೆ ಅರ್ಹರು. ಈ ಯೋಜನೆಯಡಿ ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಮಾತ್ರ ಖರೀದಿಸಲಾಗುವುದು. ಆಧಾರ್ ಸಂಖ್ಯೆಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಯ ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಖಾ ವ್ಯಸ್ಥಾಪಕರ ಕಚೇರಿ ಹಾಗೂ ಸಹಾಯವಾಣಿ ಸಂಖ್ಯೆ:082 26223358 ಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.