
ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿ ಶುಭ ದಿನ, ಸಮಯ ನೋಡಿ ಪೋಷಕರು ಶೃಂಗೇರಿ ಶಾರದಾಂಬೆ ಅಥವಾ ಕೊಲ್ಲೂರು ಮೂಕಾಂಬಿಕ ದೇವಾಲಯಗಳಲ್ಲಿ ವಿದ್ಯಾರಂಭವನ್ನು ಮಾಡಿಸುತ್ತಾರೆ ನಮ್ಮ ಶಾಲೆಯ ಪೋಷಕರು ಬಹುತೇಕ ರೈತರಾಗಿದ್ದು ಅವರ ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಎಂವಿಎಂ ಆಡಳಿತ ಮಂಡಳಿಯು ಅಕ್ಷರಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಗೌರವ್ ತಿಳಿಸಿದರು.
ಪ್ರೀ ನರ್ಸರಿ ಹಾಗೂ ಎಲ್ ಕೆ ಜಿ ಮಕ್ಕಳಿಗೆ ಇಂದು ಎಂವಿಎಂ ಶಾಲೆಯ ಆವರಣದಲ್ಲಿ ಶಾಲಾ ಆಡಳಿತ ಮಂಡಳಿ ವತಿಯಿಂದ ಅಕ್ಷರಭ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿ ವರ್ಷವೂ ನಮ್ಮ ಶಾಲೆಗೆ ಬರುವ ಪುಟಾಣಿ ಮಕ್ಕಳ ವಿದ್ಯಾರಂಭವನ್ನು ಅಕ್ಷರಭ್ಯಾಸ ಮಾಡಿಸುವ ಮೂಲಕ ಆರಂಭಿಸುವುದು ನಮ್ಮ ಶಾಲೆಯ ವಿಶೇಷವಾಗಿದೆ, ಅಲ್ಲದೆ ನಮ್ಮ ಶಾಲೆಗೆ ಬರುವ ಮಕ್ಕಳು ರೈತಾಪಿ ಕುಟುಂಬಗಳಿಂದ ಬರುವ ಮಕ್ಕಳಾಗಿದ್ದಾರೆ , ಎಲ್ಲಾ ಪೋಷಕರಿಗೂ ದೂರದ ಶೃಂಗೇರಿ ದೇವಾಲಯಕ್ಕೆ ಹೋಗಿ ಅಕ್ಷರಭ್ಯಾಸ ಮಾಡಿಸುವುದು ಕಷ್ಟ ಸಾಧ್ಯವಾಗುತ್ತದೆ ಇದನ್ನು ಅರಿತ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಲ್ಲಿ ಅಕ್ಷರಭ್ಯಾಸ ಕಾರ್ಯಕ್ರಮವನ್ನು ಶಾಲೆಯಲ್ಲಿ ಆಯೋಜನೆ ಮಾಡಿದ್ದು . ಇಂದಿನ ಕಾರ್ಯಕ್ರಮದಲ್ಲಿ ಸಾಕಷ್ಟು ಪೋಷಕರು ಭಾಗವಹಿಸಿ ತಮ್ಮ ಮಕ್ಕಳ ಪ್ರಥಮ ಅಕ್ಷರಭ್ಯಾಸವನ್ನು ಸಂಭ್ರಮದಿಂದ ಮಾಡಿಸಿದ್ದಾರೆ ಎಂದರು.
ನಮ್ಮ ಶಾಲೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯದ ಬಾಂಧವರು ಒಟ್ಟಾಗಿ ಸೇರಿ ಈ ಅಕ್ಷರಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ ಎಂದರು.
ಈ ಪೂಜೆ ವಿಶೇಷವಾಗಿದ್ದು ಮಕ್ಕಳಲ್ಲಿ ಧನಾತ್ಮಕ ಬದಲಾವಣೆ ಬರುವುದೆಂಬ ನಂಬಿಕೆ ಇದೆ, ವಿದ್ಯಾಭ್ಯಾಸಕ್ಕೆ ಮೊದಲ ಹೆಜ್ಜೆ ಇಡುತ್ತಿರುವ ಮಕ್ಕಳಿಗೆ ಸಾಂಪ್ರದಾಯಕವಾಗಿ ಸ್ವಾಗತ ಕೋರಿರುವ ಶಾಲಾ ಆಡಳಿತ ಮಂಡಳಿಯವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ, ಎಂವಿಎಂ ಶಾಲೆಯ ಶಿಕ್ಷಕರು ಮಕ್ಕಳೊಂದಿಗೆ ಅತ್ಯಂತ ಸ್ನೇಹಮಯವಾಗಿ ನಡೆದುಕೊಳ್ಳುವುದರಿಂದ ಮಕ್ಕಳು ಯಾವುದೇ ಆತಂಕವಿಲ್ಲದೆ ಶಾಲೆಗೆ ಖುಷಿಯಿಂದ ಬರುತ್ತಿದ್ದಾರೆ. ಜೊತೆಗೆ ಅತ್ಯುತ್ತಮ ಶಿಕ್ಷಣವನ್ನು ಈ ಸಂಸ್ಥೆ ನೀಡುತಿದ್ದು , ನಮ್ಮ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಲಿದೆ ಎಂದು ಪೋಷಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು
ವಿದ್ಯಾರಂಭದ ಸಲುವಾಗಿ ಆಯೋಜನೆ ಮಾಡಲಾಗಿದ್ದ ಅಕ್ಷರಭ್ಯಾಸ ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು ಭಾಗವಹಿಸಿ ತಮ್ಮ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿ ಸಂತೋಷ ವ್ಯಕ್ತಪಡಿಸಿದರು ಹಾಗೂ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪುಟಾಣಿ ಮಕ್ಕಳು ವಿಶೇಷ ಆಚರಣೆ ನೋಡಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಎಂವಿಎಂ ಶಾಲೆಯ ಆಡಳಿತ ಮಂಡಳಿ ವರ್ಗ, ಶಿಕ್ಷಕ ವೃಂದ, ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.