
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಭಾಗಿತ್ವದಲ್ಲಿ ದೊಡ್ಡಬಳ್ಳಾಪುರ ಆರಕ್ಷಕ ಇಲಾಖೆಯ ಸಹಕಾರದೊಂದಿಗೆ ಆರಕ್ಷಕ ಠಾಣಾ ಸಿಬ್ಬಂದಿಗಳಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜನಕುಂಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶ್ರೀ ದಿಲೀಪ್ ಕುಮಾರ್ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಪೊಲೀಸ್ ಇಲಾಖೆಗೆ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಶ್ರೀ ಉಮಾರಬ್ಬ ರವರು ಯೋಜನೆಯ ಕಾರ್ಯಕ್ರಮದ ಬಗ್ಗೆ ಹಾಗೂ ಆರೋಗ್ಯ ತಪಾಸಣೆ ಶಿಬಿರದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು ದೊಡ್ಡಬಳ್ಳಾಪುರ ತಾಲೂಕಿನ 9 ಆರಕ್ಷಕ ಠಾಣೆಯ ಒಟ್ಟು 120 ಸಿಬ್ಬಂದಿಗಳು ಹಾಜರಾಗಿ ರಕ್ತ ಪರೀಕ್ಷೆ ಬಿಪಿ ಪರೀಕ್ಷೆ ಹಾಗೂ ಕಣ್ಣಿನ ತಪಾಸಣೆ ಪಡೆದಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ನಗರ ಠಾಣೆಯ ಪಿಎಸ್ಐ ಕೃಷ್ಣಮೂರ್ತಿ ಹಾಗೂ ತಾಲೂಕು ಯೋಜನಾಧಿಕಾರಿಗಳಾದ ದಿನೇಶ್ ಕಣ್ಣಿನ ಆಸ್ಪತ್ರೆ ನೇತ್ರಾದಿಕಾರಿ ಡಾ ನಾಯ್ಡು ಧರ್ಮಸ್ಥಳ ಸಂಸ್ಥೆಯ ಸಿಬ್ಬಂದಿಗಳು, ಆಸ್ಪತ್ರೆ ಸಿಬ್ಬಂದಿಗಳು ಮತ್ತು ಆರಕ್ಷಕ ಠಾಣಾ ಸಿಬ್ಬಂದಿಗಳು ಹಾಜರಿದ್ದರು.